ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸಿದ್ದು ಸೂಚನೆ!

0
89

ಬೆಂಗಳೂರು : ಬಾದಾಮಿ ವಿಧಾನಸಭೆ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿರುವುದರಿಂದ ಬೆಳಗಾವಿಯ ನವಿಲು ತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಮೇಘಣ್ಣನವರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಮಲಪ್ರಭಾ ಅಚ್ಚುಕಟ್ಟು ಭಾಗದ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಹಾಗಾಗಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದರು.

ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡುವುದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ರೈತರ ಬೆಳೆಗಳಿಗೂ ನೀರು ದೊರೆಯುತ್ತದೆ ಎಂದರು. ನೀರು ಬಿಡುಗಡೆಗೆ ತಕ್ಷಣ ಕ್ರಮ ಜರುಗಿಸುವುದಾಗಿ ಪಾದೇಶಿಕ ಆಯುಕ್ತರು ತಿಳಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here