ಲೋಕಸಭಾ ಚುನಾವಣೆಗೂ ಮುನ್ನ ರಾಮ ಮಂದಿರ ನಿರ್ಮಾಣ?

0
74

ಹೈದರಾಬಾದ್: ಲೋಕಸಭಾ ಚುನಾವಣೆಗೂ ಮುನ್ನವೇ ಅಯೋಧ್ಯೆಯಲ್ಲಿ ರಾಮಂಮದಿರ ನಿರ್ಮಾಣ ಆರಂಭಗೊಳ್ಳಲಿದೆ ಎನ್ನುವ ಸುಳಿವನ್ನು ಬಿಜೆಪಿ ನೀಡಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರುವ ಕನಸಿನಲ್ಲಿರುವ ಬಿಜೆಪಿ ಈ ಬಾರಿ ರಾಮ ಮಂದಿರ ಜಪಿಸದೇ ನಿರ್ಮಾಣ ಕಾರ್ಯ ಆರಂಭಿಸಿ ಭಕ್ತರ ಮನಗೆಲ್ಲಿಲು ಮುಂದಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ.

ದೇಶದಲ್ಲಿ ಬಿಜೆಪಿ ಸರಕಾರ ಬಂದು ಮೋದಿ ಪ್ರಧಾನಿಯಾಗುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಅಡ್ಡಿ ನಿವಾರಣೆಯಾಯ್ತು ಎನ್ನುವ ರಾಮ ಭಕ್ತರ ನಿರೀಕ್ಷೆ ಇದೀಗ ನನಸಾಗುವ ಸುಳಿವು ಸಿಕ್ಕಿದೆ.ಶಿಯಾ ವಕ್ಫ್ ಮಂಡಳಿ ಈಗಾಗಲೇ ತಮ್ಮ ಪಾಲಿನ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಮ್ಮತಿ ನೀಡಿ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿರುವುದು ಇದಕ್ಕೆ ನಿದರ್ಶನ ಎನ್ನಲಾಗಿದೆ.

ಇದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇದ್ದಾರೆ ಎನ್ನಲಾಗಿದೆ. ಈ ಇಬ್ಬರು ನಾಯರು ಶಿಯಾ ಪಂಗಡದ ಧಾರ್ಮಿಕ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು ಅದರ ಫಲವೇ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತನ್ನ ಪಾಲಿನ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಸಮ್ಮತಿಸಿ ಶಿಯಾ ವಕ್ಫ್ ಮಂಡಳಿ ಅಫಿಡವಿಟ್ ಸಲ್ಲಿಕೆ ಮಾಡಿದೆ ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಲೋಕಸಭಾ ಚುನಾವಣೆಗೂ ಮುನ್ನವೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.ಹೈದರಾಬಾದ್ ನಲ್ಲಿ ಮಾತನಾಡಿದ ಶಾ ರಾಮ ಮಂದಿರ ನಿರ್ಮಾಣಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದ್ದು ಮಂದಿರ ನಿರ್ಮಾಣ ಆಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇಟ್ಟುಕೊಂಡು ಹೊರಟರೆ ನಿರೀಕ್ಷಿತ ಫಲಿತಾಂಶ ಸಿಗುವುದಿಲ್ಲ ಎನ್ನುವುದು ಖಚಿತವಾಗಿದೆ.ಪದೇ ಪದೇ ಮಂದಿ ನಿರ್ಮಾಣ ಭರವಸೆ ಹುಸಿಯಾದ ಹಿನ್ನಲೆಯಲ್ಲಿ ಈಗ ಮತ್ತೆ ಅದೇ ಭರವಸೆ ಫಲ ನೀಡಲ್ಲ ಎನ್ನುವ ಕಾರಣಕ್ಕೆ ಮುಂದಿರ ನಿರ್ಮಾಣ ಕಾರ್ಯ ಆರಂಭಿಸಿ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

- Call for authors -

LEAVE A REPLY

Please enter your comment!
Please enter your name here