ವಿದ್ಯುತ್ ಪೂರೈಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ!

0
136

ಬೆಂಗಳೂರು: ಬೆಂಗಳೂರಿನಲ್ಲಿ ವಿದ್ಯುತ್ ಪೂರೈಕೆ ಕುರಿತು ಮೂಲ ಸೌಕರ್ಯ ಗಳನ್ನು ಸುಧಾರಿಸಲು ಉನ್ನತ ಮಟ್ಟದ ಸಭೆ ಕರೆಯಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆಗೆ ತೊoದರೆ ಆಗಬಾರದು. ವಿದ್ಯುತ್ ಸೋರಿಕೆ ಆಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಲೈನ್ ಗಳನ್ನು ಹಾಕಬೇಕು ಎಂದು ತಿಳಿಸಿದರು. ಮರಗಳನ್ನು ಕಡಿಯುವುದನ್ನು ನಿಯಂತ್ರಿಸಲು ಸೂಚಿಸಿದರು.

ಬೆಂಗಳೂರು ನಗರದಲ್ಲಿ 3 ಸಾವಿರ ಮೆಗಾ ವ್ಯಾಟ್ ದಾಖಲಾದ ವಿದ್ಯುತ್ ಬೇಡಿಕೆ ಇದೆ. ನಗರದಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಿಸಲು ಭೂಗತ ಕೇಬಲ್ ಅಳವಡಿಸಲಾಗುತ್ತಿದೆ. ಈ ಸಂಬಂಧ ಇರುವ ತೊಡಕುಗಳನ್ನು ಪರಿಹರಿಸಲು, ಲೋಕೋಪಯೋಗಿ ಇಲಾಖೆ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಹಾಗೂ ಪೊಲೀಸ್ ಆಯುಕ್ತರನ್ನು ಒಳಗೊoಡ ಸಭೆ ಕರೆಯಲು ಮುಖ್ಯಮಂತ್ರಿ ಗಳು ಸೂಚಿಸಿದರು.

ಸಭೆಯಲ್ಲಿ ಆರ್ಥಿಕ ಇಲಾಖೆ , ಪ್ರಧಾನ ಕಾರ್ಯದರ್ಶಿ ಐ.ಎನ್.ಎಸ್ ಪ್ರಸಾದ್, ಇoಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ , ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯ ಮತ್ತಿತರರು ಭಾಗವಹಿಸಿದ್ದರು.

- Call for authors -

LEAVE A REPLY

Please enter your comment!
Please enter your name here