ವಾಜಪೇಯಿ ಅವರ ನಿಧನ ಅತೀವ ನೋವು ತಂದಿದೆ: ಸಿಎಂ ಕುಮಾರಸ್ವಾಮಿ

0
262

ಬೆಂಗಳೂರು: ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ, ಅಜಾತ ಶತ್ರು ಅವರ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಲನ್ನೆಂದೂ ಒಪ್ಪಲಾರೆ, ಹೊಸ ಸವಾಲುಗಳಿಗೆಂದೂ ಹೆದರಲಾರೆ” ಎನ್ನುವ ಅವರ ಕವನದ ಸಾಲೊಂದು ವಾಜಪೇಯಿ ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. ವಾಜಪೇಯಿ ಅವರು ಭ್ರಾತೃತ್ವ ಮತ್ತು ಸಹಬಾಳ್ವೆಯಲ್ಲಿ ಅಪರಿಮಿತ ನಂಬಿಕೆ ಇಟ್ಟವರು. ಅವರೊಬ್ಬ ಅತ್ಯುತ್ತಮ ವಾಗ್ಮಿ ಮತ್ತು ಆದರ್ಶ ಸಂಸದೀಯ ಪಟುವಾಗಿದ್ದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಸುಧಾರಣೆಗೆ ಅವರು ಮಾಡಿದ ಪ್ರಯತ್ನಗಳು ಶ್ಲಾಘನೀಯ. ವೈಯಕ್ತಿಕವಾಗಿ ನಾನು ಅವರನ್ನು ಭೇಟಿ ಮಾಡಿದ್ದೆ. ಅವರ ಸೌಜನ್ಯ ನಮಗೆಲ್ಲರಿಗೂ ಆದರ್ಶ ಅವರ ನಿಧನದಿಂದ ದೇಶ ಒಬ್ಬ ದಾರ್ಶನಿಕ ವ್ಯಕ್ತಿತ್ವದ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here