ಕೊಡಗು ಮರು ನಿರ್ಮಾಣಕ್ಕೆ ಸರಕಾರ ಬದ್ದ: ಡಿಸಿಎಂ

0
9

ಬೆಂಗಳೂರು:ಕೊಡಗು ಮರುನಿರ್ಮಾಣಕ್ಕೆ ರಾಜ್ಯ ಸರಕಾರ ಬದ್ಧವಿದೆ. ಅಲ್ಲಿನ‌ ಅನಾಹುತ, ಹಾನಿ ಬಗ್ಗೆ ಆದ್ಯತೆ ಮೇಲೆ ಸರಿ ಮಾಡಲಾಗುವುದು ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ,ಕೇಂದ್ರ ಸರಕಾರ ಹಣಕಾಸಿನ‌ ನೆರವು ಕೊಟ್ಟಿಲ್ಲ. ನಮ್ಮ ಬಗ್ಗೆ ಅನುಕಂಪವನ್ನೂ ವ್ಯಕ್ತಪಡಿಸಿಲ್ಲ. ಕನಿಷ್ಠ ಪಕ್ಷ ಆತ್ಮಸ್ಥೈರ್ಯವನ್ನಾದರೂ ತುಂಬಿದ್ದರೆ ಅಲ್ಲಿನ ನಿರಾಶ್ರಿತರಿಗೂ ನೆಮ್ಮದಿ ಇರುತ್ತಿತ್ತು. ಆದರೆ ಕೇಂದ್ರ ಸರಕಾರ ಕೇರಳಕ್ಕೆ ಮಾತ್ರ ಹಣಕಾಸಿನ‌ ನೆರವು ನೀಡಿ, ನಮಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಷ್ಟದ ಅಂದಾಜು ಕಾರ್ಯ ನಡೆಯುತ್ತಿದೆ. ಅಂದಾಜು ಪಟ್ಟಿ ಸಿದ್ದಗೊಂಡ ಬಳಿಕ ಕೇಂದ್ರಕ್ಕೆ ಸಹಾಯ ಕೇಳಲಾಗುವುದು, ಅಗತ್ಯಬಿದ್ದರೆ ನಿಯೋಗದ ಮೂಲಕ ತೆರಲಕಿ ಮನವಿ ಮಾಡುತ್ತೇವೆ ಎಂದರು.

ಪೊಲೀಸ್ ಠಾಣೆಗಳಲ್ಲಿ ಶಸ್ತ್ರಾಸ್ತ್ರ ಕೊರತೆ ಕುರಿತು ಸಿಎಜಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು,
ಎಲ್ಲ ಪೊಲೀಸ್ ಠಾಣೆಯಲ್ಲು ಅಗತ್ಯ ಶಸ್ತ್ರಾಸ್ತ್ರ ಗಳಿವೆ. ಆದರೂ ಸಿಎಜಿ ವರದಿಯನ್ನು ಗಂಭೀರವಾಗಿ ಪರಿಗಣಿಸಿ, ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಅಗತ್ಯಬಿದ್ದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದರು.

- Call for authors -

LEAVE A REPLY

Please enter your comment!
Please enter your name here