ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಡಿ. 6ರಂದು ಮಾಜಿ ಮುಖ್ಯಮಂತ್ರಿಗಳು, ನೀರಾವರಿ ಸಚಿವರುಗಳ ಸಭೆ

0
398

ಬೆಂಗಳೂರು: ರಾಜ್ಯದ ಎಲ್ಲ ನೀರಾವರಿ ಯೋಜನೆ ಗಳ ಕುರಿತು ಸೂಕ್ತ ನಿಲುವು ತಳೆಯುವ ನಿಟ್ಟಿನಲ್ಲಿ ಚರ್ಚಿಸಲು ಡಿಸೆಂಬರ್ 6 ರಂದು ಎಲ್ಲ ಮಾಜಿ ಮುಖ್ಯಮಂತ್ರಿ ಗಳು ಹಾಗೂ ಮಾಜಿ ನೀರಾವರಿ ಸಚಿವರ ಸಭೆ ಕರೆಯಲು ಇಂದು ನಿರ್ಧರಿಸಲಾಯಿತು.

ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಹದಾಯಿ ನ್ಯಾಯಾಧಿಕರಣದ ಇತ್ತೀಚಿನ ಬೆಳವಣಿಗೆ ಕುರಿತು ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇಂದು ನಡೆದ ಸಭೆಯಲ್ಲಿ ಮಹದಾಯಿ ನ್ಯಾಯಾಧಿಕರಣ ನೀರು ಹಂಚಿಕೆ ತೀರ್ಪು ನೀಡಿದ ನಂತರ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.

ರಾಜ್ಯದ ರೈತರ ಹಿತದೃಷ್ಟಿಯಿಂದ ನೀರಿನ ಬಳಕೆಗೆ ಕಾಮಗಾರಿ ಪ್ರಾರಂಭಿಸಲು ಸರ್ಕಾರ ತಯಾರಿ ನಡೆಸಲು ಅನುವಾಗುವಂತೆ ನೀರು ಹಂಚಿಕೆಯ ಗಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಜೊತೆಗೆ ನಿಯಮ 5(3) ರಡಿ ಸ್ಪಷ್ಟೀಕರಣಕ್ಕೆ ಮನವಿ ಸಲ್ಲಿಸಲಾಗಿದೆ ಹಾಗೂ ಹೆಚ್ಚುವರಿ ನೀರು ಪಡೆಯುವ ನಿಟ್ಟಿನಲ್ಲಿ ಸ್ಪೆಷಲ್ ಲೀವ್ ಪೆಟಿಷನ್ ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು. ಆ ಭಾಗದ ರೈತರ ಹಿತಾಸಕ್ತಿ ಕಾಯಲು ಒಟ್ಟಾಗಿ ಶ್ರಮಿಸಲು ತೀರ್ಮಾನಿಸಲಾಯಿತು.

- Call for authors -

LEAVE A REPLY

Please enter your comment!
Please enter your name here