ಬೆಂಗಳೂರು: ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಬರಬೇಕಾದ ಅನುಧಾನಗಳನ್ನ ಬಿಡುಗಡೆ ಮಾಡಿಸುವಂತೆ ಮತ್ತು ಮೇಕೆದಾಟು ಯೋಜನೆ ಸಂಬಂಧ ಕೇಂದ್ರದ ನಾಯಕರ ಮನವೊಲಿಕೆ ಮಾಡವಂತೆ ಸಂಸದರಿಗೆ ಸಿಎಂ ಕುಮಾರಸ್ವಾಮಿ ಮನವಿ ಮಾಡಿದರು.
ಅಭಿವೃದ್ದಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಜೊತೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಧಾನಸೌಧದಲ್ಲಿ ಸಭೆ ನಡೆಸಿದರು. ಸಭೆ ನಂತರ ಮಾತನಾಡಿದ ಅವರು, ಕೇಂದ್ರದಿಂದ ನರೇಗಾ ಯೋಜನೆಯಡಿ 938 ಕೋಟಿ ರೂ., ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 1100 ಕೋಟಿ ರೂಪಾಯಿ ಬಿಡುಗಡೆ ಆಗಬೇಕು. ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ 560 ಕೋಟಿ ಮಾತ್ರ ಬಿಡುಗಡೆ ಆಗಿದೆ. ಇನ್ನೂ 60% ಹಣ ಕೇಂದ್ರದಿಂದ ಬರಬೇಕಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ಸಂಬಂಧ ಕೇಂದ್ರದ ನಾಯಕರ ಮನವೊಲಿಕೆ ಮಾಡಬೇಕು ಎಂದು ಸಿಎಂ ಸಂಸದರಿಗೆ ಮನವಿ ಮಾಡಿದರು. ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಕಲ್ಲಿದ್ದಲು ಸಿಕ್ತಿಲ್ಲ. ರಾಜ್ಯಕ್ಕೆ ಮೈನಿಂಗ್ ಅಲಾಟ್ ಆಗಬೇಕು. ರೈಲ್ವೇ ಯೋಜನೆಗೆ 50% ರಾಜ್ಯ ಹಣ ಕೊಡತ್ತೆ. ಆದಾಗ್ಯೂ ರೇಲ್ವೆ ಯೋಜನೆ ನೆನೆಗುದಿಗೆ ಬಿದ್ದಿದೆ. ಇದೆಲ್ಲದರ ಬಗ್ಗೆಯೂ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಬೇಕು ಅಂತ ಸಿಎಂ ಕುಮಾರಸ್ವಾಮಿ ಸಂಸದರಿಗೆ ಮನವಿ ಮಾಡಿದ್ರು.
ರಾಜ್ಯದಲ್ಲಿ ವ್ಯಾಪಕವಾಗಿ ಬೆಳೆಯುವ ತೊಗರಿ, ಹೆಸರುಕಾಳು, ಕಬ್ಬು, ಭತ್ತ, ಈರುಳ್ಳಿ, ಟೋಮ್ಯಾಟೋ, ತೆಂಗು ಮುಂತಾದ, ಬೆಳೆ ಗಳಿಗೆ ಬೆಂಬಲ ಬೆಲೆ ದೊರಕುತ್ತಿಲ್ಲ. ಈ ಸಂಬಂಧ ಕೇಂದ್ರದ ಸಚಿವರನ್ನು ಭೇಟಿ ಮಾಡಲಾಗಿದೆ. ಸಕಾಲಕ್ಕೆ ಬೆಂಬಲ ಬೆಲೆ ಪ್ರಕಟಿಸುವಂತೆ ಕೇಂದ್ರದ ಗಮನ ಸೆಳೆಯುವಂತೆಯೂ ಸಿಎಂ ಮನವಿ ಮಾಡಿದ್ರು.
ಸಭೆಯಲ್ಲಿ ಸಂಸದರಾದ ಪ್ರಕಾಶ್ ಹುಕ್ಕೇರಿ, ಪ್ರಹ್ಲಾದ್ ಜೋಶಿ, ಪಿ.ಸಿ ಮೋಹನ್, ವಿಎಸ್ ಉಗ್ರಪ್ಪ, ಮುದ್ದ ಹನುಮೇಗೌಡ, ಶಿವರಾಮೇಗೌಡ ಸೇರಿ ಹಲವು ಉಪಸ್ಥಿತರಿದ್ರು. ಕೇಂದ್ರ ಸಚಿವರಾದ ಸದಾನಂದಗೌಡ, ಅನಂತ್ ಕುಮಾರ್ ಹೆಗಡೆ, ನಿರ್ಮಲಾ ಸೀತಾರಾಮನ್, ರಮೇಶ್ ಜಿಗಜಿಣಗಿ ಗೈರಾಗಿದ್ರು.









