ರೈತರ ಸಾಲಕ್ಕೆ ಆಧಾರ್ ವಿಳಾಸವನ್ನೇ ಕಡ್ಡಾಯ ಮಾಡಬಾರದು:ಸಿಎಂಗೆ ಆರ್.ವಿ ದೇಶಪಾಂಡೆ ಪತ್ರ

0
2

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವಾಗ ರೇಷನ್ ಕಾರ್ಡ್ ವಿಳಾಸ ಹಾಗೂ ಆಧಾರ್ ಕಾರ್ಡ್ ವಿಳಾಸವನ್ನೇ ಸಾಲ ನೀಡಲು ಪ್ರಮುಖ ಆಧಾರವನ್ನಾಗಿ ಪರಿಗಣಿಸಬಾರದು, ಕೂಡಲೇ ಈ ಸಂಬಂಧಿತ ಸರ್ಕಾರಿ ಆದೇಶಕ್ಕೆ ತಿದ್ದುಪಡಿ ತರಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಕೃಷಿ ಸಾಲವನ್ನು ಕೃಷಿ ಚಟುವಟಿಕೆಗೆ ನೀಡಲಾಗುತ್ತದೆಯೇ ಹೊರತು ಅವರ ಮನೆಯನ್ನು ಆಧಾರವಾಗಿಟ್ಟುಕೊಂಡು ಸಾಲ ನೀಡುವುದಿಲ್ಲ. ಆದರೆ ಹೊಸ ಆದೇಶದಲ್ಲಿ ಸಾಲ ನೀಡುವಾಗ ಸಹಕಾರ ಸಂಘಗಳು ಆಧಾರ್ ಕಾರ್ಡ್ ವಿಳಾಸವನ್ನು ಪರಿಗಣಿಸಿ ಸಾಲ ನೀಡಬೇಕೆಂದು ಆದೇಶಿಸಲಾಗಿದೆ, ಇದು ರೈತರು ಹಾಗೂ ಸಹಕಾರ ಸಂಘಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗುತ್ತದೆ.ಕೂಡಲೇ ಸರ್ಕಾರ ಇದಕ್ಕೆ ತಿದ್ದುಪಡಿ ತಂದು ಕೃಷಿ ಚಟುವಟಿಕೆ ನಡೆಸುವ ಪ್ರತಿಯೊಬ್ಬರಿಗೂ ಸಾಲ ನೀಡಲು ಸೂಚಿಸಬೇಕಾಗಿ ಮನವಿ ಮಾಡುತ್ತೇನೆ. ಅಲ್ಲದೆ ಕೃಷಿ ಭೂಮಿ ಇದ್ದ ಕ್ಷೇತ್ರದಲ್ಲಿ ವಾಸವಾಗಿರದೆ ಇರುವವರಿಂದ ಶೇ.7ರಷ್ಟು ಬಡ್ಡಿ ಆಕರ ಮಾಡುವಂತೆ ಹಾಗೂ ಆ ಕ್ಷೇತ್ರದಲ್ಲಿ ವಾಸವಾಗಿರದೇ ಇರುವವರಿಗೆ ಹೊಸ ಸಾಲ ನೀಡದಂತೆ ಆದೇಶ ನೀಡಲಾಗಿದೆ, ಇದನ್ನು ಪುನರ್ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here