ಪರಿಶಿಷ್ಟರ ಕಲ್ಯಾಣ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಗೋವಿಂದ ಕಾರಜೋಳ ಸೂಚನೆ

0
4

ಬೆಂಗಳೂರು. ಜೂ.10: ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಉಪಮುಖ್ಯಮಂತ್ರಿಯವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.

ವಿಧಾನಸೌಧದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟರ ಕಲ್ಯಾಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಿ, ಅನುದಾನವನ್ನೂ ಒದಗಿಸಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸ್ವಯಂ ಪ್ರೇರಿತರಾಗಿ ಈ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸಮುದಾಯವು ಈ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಯಾಗಬೇಕು. ಬ್ಯಾಕ್ ಲಾಗ್ ಹುದ್ದೆಗಳ ನೇಮಕಕ್ಕೆ ಈ ಹಿಂದೆ ಪ್ರಗತಿ ಪರಿಶೀಲನೆ ನಡೆಸಿ, ತ್ವರಿತವಾಗಿ ಭರ್ತಿ ಮಾಡುವಂತೆ ಸೂಚಿಸಲಾಗಿತ್ತು. ವಿವಿಧ ಯೋಜನೆಗಳು, ಬ್ಯಾಕ್‍ಲಾಗ್ ಹುದ್ದೆಗಳ ನೇಮಕ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಅವರು ಸೂಚಿಸಿದರು. ವಿವಿಧ ಶಾಸಕರು ವಿವಿಧ ಯೋಜನೆಗಳು, ಅಹವಾಲುಗಳ ಬಗ್ಗೆ ಗಮನ ಸೆಳೆದರು.

- Call for authors -

LEAVE A REPLY

Please enter your comment!
Please enter your name here