ಕೋವಿಡ್ ನಿಯಂತ್ರಣಕ್ಕೆ ಸರ್ಕಸ್: ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ‌

0
2

ಬೆಂಗಳೂರು, ಜೂನ್ 25: ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್ ಹಾಗೂ ಗೋವಿಂದ ಕಾರಜೋಳ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಭೈರತಿ ಬಸವರಾಜ, ಸಂಸದ ತೇಜಸ್ವಿ ಸೂರ್ಯ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಂಗಳೂರು ನಗರದಲ್ಲಿ ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು:

1. ರೋಗಿಗಳು ಕಾಯುವ ಪರಿಸ್ಥಿತಿ ಬರಬಾರದು. ಪರೀಕ್ಷಾ ವರದಿ ಬಂದು ಸೋಂಕು ದೃಢ ಪಟ್ಟ ನಂತರ ತ್ವರಿತವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ಈಗ 100 ಅಂಬ್ಯುಲೆನ್ಸ್ ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ಈ ಉದ್ದೇಶಕ್ಕೆ ಬಳಸಲು ತೀರ್ಮಾನಿಸಲಾಯಿತು.

2. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ.

3. ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಲಭ್ಯತೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ, ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್ ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.

4. ಹಾಸಿಗೆಗಳ ಲಭ್ಯತೆ ಕುರಿತು, ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃ಼ಜಿಸಲು ನಿರ್ಧರಿಸಲಾಯಿತು.

5 ರಾಜ್ಯದಲ್ಲಿ ಶೇ. 61 ರಷ್ಟು ಜನ ಗುಣಮುಖರಾಗಿದ್ದಾರೆ. 3700 ಸಕ್ರಿಯ ಪ್ರಕರಣಗಳು ಇವೆ.

6 ಇಲಾಖೆಗಳು ಈ ನಿಟ್ಟಿನಲ್ಲಿ ಸಮನ್ವಯದಿಂದ ಕ್ರಮ ವಹಿಸುವಂತೆ ಸೂಚಿಸಲಾಯಿತು.

7. ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ನಡೆಸಲಾಗುವುದು.

- Call for authors -

LEAVE A REPLY

Please enter your comment!
Please enter your name here