ಪ್ರಾಣಿಗಿಂತಲೂ ಕೀಳಾದ ಕೋವಿಡ್ ಸೋಂಕಿತನ ಅಂತ್ಯಕ್ರಿಯೆ!

0
4

ರಾಯಚೂರು: ಬಳ್ಳಾರಿಯಲ್ಲಿ ಮೃತಪಟ್ಟ ಸೋಂಕಿತರ ಅಂತ್ಯಕ್ರಿಯೆ ನಡೆಸಿದ ಅಮಾನವೀಯ ವರ್ತನೆ ಮಾಸುವ ಮುನ್ನವೇ, ಯಾದಗಿರಿಯಲ್ಲಿ ನಿನ್ನೆ ನಡೆದ ಈ ಪ್ರಕರಣ ನಿಜಕ್ಕೂ ಮನುಷ್ಯತ್ವವನ್ನೇ ಮರೆತಂತೆನಿಸಿದೆ.

ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಭಾನುವಾರ ಮಗಳ ಮದುವೆ ಮುಗಿಸಿದ ನಂತರ, ಸೋಮವಾರ ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ, ಕೋವಿಡ್ -19 ಸೋಂಕಿತ, ಯಾದಗಿರಿ ಜಿಲ್ಲೆಯ ಹೋನಗೆರಾ ತಾಲೂಕಿನ ವ್ಯಕ್ತಿಯ ಮೃತದೇಹವನ್ನು ನಿನ್ನೆ ಜಮೀನು ಒಂದರಲ್ಲಿ ಅಮಾನವೀಯ ರೀತಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ‌.

ಯಾದಗಿರಿ ಸಮೀಪದ ಹೊನಗೆರ ಗ್ರಾಮದ ಮೃತನ ಸಹೋದರನ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಮೃತನ ಪತ್ನಿ, ಮಕ್ಕಳು ಹಾಗೂ ಸಂಬಂಧಿಕರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಅಂತ್ಯಸಂಸ್ಕಾರದ ವೇಳೆ, ಮೃತನ ಕಿರಿಯ ಸಹೋದರನನ್ನು ಹೊರತುಪಡಿಸಿದರೆ ಉಳಿದ ಸಂಬಂಧಿಕರು ಯಾರೂ ಉಪಸ್ಥಿತರಿರಲಿಲ್ಲ.
ಆದರೆ, ಪಶು ಗಳಿಗಿಂತಲೂ ಕೀಳಾಗಿ ಮೃತಪಟ್ಟ ಸೋಂಕಿತನ ಅಂತ್ಯಕ್ರಿಯೆ ನಡೆಸಿದ ಪರಿ ಇಲ್ಲಿನ ಜನರನ್ನು ಬೆಚ್ಚಿ ಬೀಳಿಸಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ.

- Call for authors -

LEAVE A REPLY

Please enter your comment!
Please enter your name here