ಕೃಷಿ,ತೋಟಗಾರಿಕಾ ವಿಶ್ವವಿದ್ಯಾಲಯಗಳು ಇರುವವರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರು ಅಜರಾಮರ:ಬಿ.ಸಿ.ಪಾಟೀಲ್

0
1

ಶಿವಮೊಗ್ಗ,ಜು.6: ಕೃಷಿ,ತೋಟಗಾರಿಕಾ ವಿಶ್ವವಿದ್ಯಾಲಯಗಳು ಇರುವವರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಅಜರಾಮರವಾಗಿರುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಕೆಲಸಗಳು ಮುನ್ನೋಟ ಹೆಸರನ್ನು ಶಾಶ್ವತವಾಗುವಂತೆ ಮಾಡಿವೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೂರದೃಷ್ಟಿಯಿಂದ ಕನಸು ಚಿಂತನೆಯಿಂದಾಗಿ ಶಿವಮೊಗ್ಗದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿತವಾಗಿದ್ದು ಈ ವಿಶ್ವವಿದ್ಯಾಲಯ ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ ಮತ್ತು ಕಿರೀಟಪ್ರಾಯವಾಗಿದೆ.

ಸೆಪ್ಟೆಂಬರ್ ನಿಂದ ಅಕಾಡೆಮಿಕ್ ವರ್ಷ ಆರಂಭವಾಗಲಿದೆ.ಆರಂಭದಲ್ಲಿ ಅರವತ್ತು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದ್ದು,ಆಗಸ್ಟ್ 10ರೊಳಗೆ ಕಾಮಗಾರಿ ಕೆಲಸ ಮುಗಿಸಿದಲ್ಲಿ ಆಗಸ್ಟ್ ಕೊನೆಯವಾರದಲ್ಲಿ ಉದ್ಘಾಟನೆ ನೆರವೇರಿಸಿ ಸೆಪ್ಟೆಂಬರ್ ಮೊದಲ ವಾರದಲ್ಲಿ ತರಗತಿಗಳನ್ನು ಆರಂಭಿಸುವುದಾಗಿ ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹೆಚ್.ಹಾಲಪ್ಪ, ಜಿಲ್ಲಾಧಿಕಾರಿ ಶಿವಕುಮಾರ್ ,ಮಲೆನಾಡು ಪ್ರದೇಶ ಅಭಿವೃದ್ಧಿ ಅಧ್ಯಕ್ಷ ಎಸ್ ಗುರುಮೂರ್ತಿ ,
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

- Call for authors -

LEAVE A REPLY

Please enter your comment!
Please enter your name here