ಕೊರೋನಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಿ: ಐವಾನ್ ಡಿಸೋಜಾ ಒತ್ತಾಯ

0
3

ಮಂಗಳೂರು: ಕೊರೊನಾ ಉಪಕರಣಗಳ ಖರೀದಿಯಲ್ಲಿ ಭಾರೀ ಭಷ್ಟಾಚಾರ ನಡೆದಿದೆ ಎಂದು ಮಾಜಿ‌ ಸಿಎಂ ಸಿದ್ದರಾಮಯ್ಯರು ಆರೋಪಿಸಿದ್ದು ಹೀಗಾಗಿ ಕೂಡಲೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ವಿಧಾನಪರಿಷತ್ ಮಾಜಿ‌ ಸದಸ್ಯ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ.

ಮಂಗಳೂರಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಉಪಕರಣ ಖರೀದಿಯಲ್ಲಿ ಎಷ್ಟು ಅವ್ಯವಹಾರ ಆಗಿದೆ ಎಂಬುದನ್ನು ವಿವರವಾಗಿ ಜನರಿಗೆ ಅಂಕಿ ಅಂಶಗಳನ್ನು ತಿಳಿಸಿಕೊಟ್ಟಿದ್ದಾರೆ. ಹೀಗಾಗಿ ಸರ್ಕಾರ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದರ ಬದಲು ದಾಖಲೆ ಕೊಡಿ ಎಂದು ಕೇಳಬಾರದು.

ಕೊರೊನಾ ಹೆಸರಿನಲ್ಲಿ ಹಣ ತಿಂದವರು ದೇಶದಲ್ಲಿ ಇರಲು, ಮಂತ್ರಿ ಸ್ಥಾನದಲ್ಲಿ ಇರಲು‌ ನಾಲಾಯಕ್. ಕೊರೊನಾ ಪೀಡಿತರು ಹಣ ಇಲ್ಲದೇ ಪರದಾಡುತ್ತಿದ್ದಾರೆ. ಬೀದಿಯಲ್ಲಿ ಜನ ಸಾಯುತ್ತಿದ್ದಾರೆ. ಇನ್ನು ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರ ಮಾಡುತ್ತಿಲ್ಲ. ಅವರಾಗಿಯೇ ಅಂತ್ಯಸಂಸ್ಕಾರ ಮಾಡಲು ಹಣ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

- Call for authors -

LEAVE A REPLY

Please enter your comment!
Please enter your name here