ಕೊರೊನಾ ನಿಯಂತ್ರಣದ ನಿಯಮ ಪಾಲನೆಯೊಂದಿಗೆ ಕಾಮಗಾರಿಗಳ ಅನುಷ್ಠಾನ ಕ್ಕೆ ಡಿಸಿಎಂ ಸೂಚನೆ

0
1

ಕೊಪ್ಪಳ ಜು.15: ಕೊರೊನಾ‌‌ ಸೊಂಕಿನ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಕೊಂಡು ಕಾಮಗಾರಿಗಳನ್ನು ಅನುಷ್ಠಾನ ಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದರು.

ಕುಷ್ಟಗಿ ಬಳಿಯ ಪ್ರವಾಸಿಮಂದಿರಲ್ಲಿಂದು ಕೊಪ್ಪಳ ಹಾಗೂ ರಾಯಚೂರು ವಿಭಾಗದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಟ್ಟಡ, ರಸ್ತೆ ನಿರ್ಮಾಣದ ಕಾರ್ಮಿಕರು ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯನಿರ್ವಹಿಸುವಂತೆ ಕ್ರಮವಹಿಸಬೇಕು‌. ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ರಸ್ತೆಗಳ ನಿರ್ವಹಣೆ ಯನ್ನು ಉತ್ತಮವಾಗಿ ನಿರ್ವಹಿಸಬೇಕು. ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟವನ್ನು ಕ್ಷೇತ್ರ ಪ್ರವಾಸ ಕೈಗೊಂಡು ಪರಿಶೀಲಿಸಿ, ಕಳೆದ ಮೂರು ತಿಂಗಳಲ್ಲಿ ಅನುಷ್ಠಾನ ವಾಗಬೇಕಾಗಿದ್ದ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸುವಂತೆ ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಶಾಸಕ  ಹಾಲಪ್ಪ ಆಚಾರ್ ವಿಭಾಗಗಳ ಅಭಿಯಂತರರು ಉಪಸ್ಥಿತರಿದ್ದರು.

- Call for authors -

LEAVE A REPLY

Please enter your comment!
Please enter your name here