ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗೂ ಕೋವಿಡ್ ಸೋಂಕು ತಗುಲಿದೆ. ಪರೀಕ್ಷಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಎಂ ಆರೋಗ್ಯ ಸ್ಥಿರವಾಗಿದೆ ಯಾವುದೇ ಆತಂಕ ಬೇಡ, ವೈದ್ಯಕೀಯ ತಂಡ ನಿರಂತರವಾಗಿ ಸಿಎಂ ಆರೋಗ್ಯವನ್ನು ಪರಿಶೀಲನೆ ಮಾಡಲಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ಸಿಎಂ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಇರುವ ಸಿಎಂ
ಆದಷ್ಟು ಬೇಗ ಕರ್ತವ್ಯಕ್ಕೆ ಮರಳುತ್ತೇನೆ, ಯಾರೂ ಆತಂಕಕ್ಕೊಳಗಾಗಬೇಡಿ ಎಂದು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ರಾಜ್ಯದ ಜನರು ಮತ್ತು ಮಠಾಧಿಪತಿಗಳು ನನಗೆ ಶೀಘ್ರ ಗುಣಮುಖವಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ ಎಂದು ಆದಷ್ಟು ಬೇಗ ನಾನು ಗುಣಮುಖನಾಗಿ ಆಸ್ಪತ್ರೆಯಿಂದ ಹೊರಬಂದು ಕೆಲಸ ಕಾರ್ಯದಲ್ಲಿ ತೊಡಗಲಿದ್ದೇನೆ ಎಂದಿದ್ದಾರೆ.









