ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ: ಸಿದ್ದರಾಮಯ್ಯ ಸೂಚನೆ

0
2

ಬೆಂಗಳೂರು : ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಧ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಸಿಯವರು ತಿಳಿಸಿದರು.

ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು.

ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಅವರು ಸೂಚಿಸಿದರು.

ಕೊರೊನಾ ಕುರಿತಾಗಿಯೂ‌ ತಹಶೀಲ್ದಾರರಿಂದ ಮಾಹಿತಿ‌ ಪಡೆದುಕೊಂಡ ಸಿದ್ದರಾಮಯ್ಯ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು.

ಸೋಂಕು ನಿಯಂತ್ರಣಕ್ಜೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಸೂಚಿಸಿದರು.

- Call for authors -

LEAVE A REPLY

Please enter your comment!
Please enter your name here