ಸೌಮ್ಯರೆಡ್ಡಿಗೆ ಒಲಿದ “ಜಯ”ನಗರ

0
27

ಬೆಂಗಳೂರು:‌ ಬಿಜೆಪಿ ಭದ್ರಕೋಟೆ ಜಯನಗರ‌‌ ವಿಧಾನಸಭಾ ಕ್ಷೇತ್ರ ಕೈ ಪಾಲಾಗಿದೆ.ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಗೆಲುವಿನೊಂದಿಗೆ ಚೊಚ್ಚಲ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಎನ್.ಎಂ.ಕೆ.ಆರ್.ವಿ ಕಾಲೇಜಿನಲ್ಲಿ ನಡೆಯಿತು. ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಅಂತಿಮ 15 ನೇ ಸುತ್ತಿನಲ್ಲೂ ಮುನ್ನಡೆಯೊಂದಿಗೆ ಗಲುವಿನ ನಗೆ ಬೀರಿದರು.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ 54457 ಪಡೆದರೆ ಬಿಜೆಪಿಯ ಪ್ರಹ್ಲಾದ್ ಬಾಬು 51568 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.2889 ಮತಗಳ ಅಂತರದಿಂದ ಸೌಮ್ಯಾರೆಡ್ಡಿ ಜಯನಗರವನ್ನು ಗೆದ್ದುಕೊಂಡರು.ಲಂಚ ಮುಕ್ತ ಜಯನಗರ ನಿರ್ಮಾಣ ಅಂಜೆಡಾವನ್ನು ಜನರ ಮುಂದಿಟ್ಟು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರವಿಕೃಷ್ಣ ರೆಡ್ಡಿ 1591 ಮತಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಹಿಂಪಡೆದು ಮೈತ್ರಿ ಸರ್ಕಾರದ ಭಾಗವಾದ ಕಾಂಗ್ರೆಸ್ ಗೆ ಬೆಂಬಲ ನೀಡಿತ್ತು.ಕೊನೆ ಕ್ಷಣದಲ್ಲಿ ಎಂಇಪಿ ಕೂಡ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದರು.
ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವ ನೇರಾ ಹಣಾಹಣಿ ಏರ್ಪಟ್ಟಿತ್ತು. ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಮೈತ್ರಿಯಲ್ಲಿ ಗೆಲುವು ಸಾಧಿಸಿದ ಮೊದಲ ಅಭ್ಯರ್ಥಿ ಸೌಮ್ಯರೆಡ್ಡಿಯಾಗಿದ್ದಾರೆ.

- Call for authors -

LEAVE A REPLY

Please enter your comment!
Please enter your name here