ಯಲಚೇನಹಳ್ಳಿಯಿಂದ ರೇಷ್ಮ ಸಂಸ್ಥೆವರೆಗಿನ ಮೆಟ್ರೋ ಹಸಿರು ಮಾರ್ಗ ಉದ್ಘಾಟನೆ

0
5

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ ನೂತನವಾಗಿ ನಿರ್ಮಿಸಿರುವ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ವರೆಗಿನ 6.00 ಕಿಮೀ. ಮೆಟ್ರೋ ಹಸಿರು ಮಾರ್ಗದ ಉದ್ಘಾಟನೆಯನ್ನು ಇಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ನೆರವೇರಿಸಿದರು.

ನಗರದ ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣದ ಆವರಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವರುಗಳಾದ ಎಸ್.ಸುರೇಶ್ ಕುಮಾರ್, ಆರ್.ಅಶೋಕ್, ಬಿ.ಎ. ಬಸವರಾಜು, ಎಸ್.ಟಿ.ಸೋಮಶೇಖರ್ ಮತ್ತು ಸಂಸದ ಪಿ.ಸಿ.ಮೋಹನ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು

- Call for authors -

LEAVE A REPLY

Please enter your comment!
Please enter your name here