ಕಾರ್ಮಿಕರಿಗೆ ಭರ್ಜರಿ ಕೊಡುಗೆ ನೀಡಿದ ಸಚಿವ ಶಿವರಾಮ ಹೆಬ್ಬಾರ್

0
1

ಬೆಂಗಳೂರು : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ಕಾರ್ಮಿಕ ಕಲ್ಯಾಣ ಭವನದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಮಂಡಳಿಯ ನಿರ್ದೇಶಕರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭೆ ನಡೆಸಿದರು.

ಇಂದಿನ ಸಭೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯ ವತಿಯಿಂದ ನೀಡಲಾಗುತ್ತಿರುವ ಧನ ಸಹಾಯದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡುವುದರ ಮೂಲಕವಾಗಿ ಸಚಿವ ಶಿವರಾಮ ಹೆಬ್ಬಾರ್ ಅವರು ಕಾರ್ಮಿಕರಿಗೆ ಭರ್ಜರಿ ಕೊಡುಗೆಯನ್ನು ನೀಡಿದ್ದಾರೆ‌.

ಪಿಂಚಣಿ ಸೌಲಭ್ಯವನ್ನು 2000 ದಿಂದ 3 000 ರೂಪಾಯಿಗಳಿಗೆ ಏರಿಸಲಾಗಿದೆ, ಕುಟುಂಬ ಪಿಂಚಣಿಯನ್ನು 1000 ದಿಂದ 2000 ರೂಪಾಯಿ ವರೆಗೆ ಹೆಚ್ಚಿಸಲಾಯಿತು, ಹೆರಿಗೆ ಸೌಲಭ್ಯಗಳನ್ನು 20,00೦ ದಿಂದ 25,000 ರೂಪಾಯಿಗಳಿಗೆ ಹೆಚ್ಚಿಸಲಾಯಿತು, ಮಂಡಳಿವತಿಯಿಂದ ಹೆಣ್ಣು ಮಗುವಿಗೆ ನೀಡಲಾಗುತ್ತಿದ್ದ 30,000 ರೂಪಾಯಿಯನ್ನು 35,000 ರೂಪಾಯಿಗಳಿಗೆ ಏರಿಸಲಾಯಿತು, ನರ್ಸರಿ ವಾರ್ಷಿಕ ಸಹಾಯ ಧನವನ್ನು 3000 ದಿಂದ 5000 ರೂಪಾಯಿಗಳಿಗೆ ಹೆಚ್ಚಿಸಲಾಯಿತು, 1 ರಿಂದ ನಾಲ್ಕನೇ ತರಗತಿಯ ಮಕ್ಕಳಿಗೆ 3 ರಿಂದ 5 ಸಾವಿರ ,5 ರಿಂದ 8 ನೇ ತರಗತಿಯ ಮಕ್ಕಳಿಗೆ 5 ಸಾವಿರ ದಿಂದ 8 ಸಾವಿರ, 9 ರಿಂದ 10 ನೇ ತರಗತಿಯ ಮಕ್ಕಳಿಗೆ 10 ರಿಂದ 12 ಸಾವಿರ , ಪ್ರಥಮ ಪಿಯುಸಿ ಮಕ್ಕಳಿಗೆ 10,೦0೦ ದಿಂದ 15,000 , ಆಯ್.ಟಿ.ಆಯ್ ಮಕ್ಕಳಿಗೆ 12,000 ರಿಂದ 20,000 , ಪದವಿ ವಿಧ್ಯಾರ್ಥಿಗಳಿಗೆ 15,000 ದಿಂದ 25,000 ಹೆಚ್ಚಿಸಲಾಗಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 25,000 ರಿಂದ 40,000 ಸಾವಿರ ಏರಿಸಲಾಗಿದೆ, ಡಿಪ್ಲೊಮಾ ವಿಧ್ಯಾರ್ಥಿಗಳಿಗೆ 15,000 ರಿಂದ 20,000 ಸಾವಿರ , ಎಮ್.ಬಿ.ಬಿ.ಎಸ್ ವಿಧ್ಯಾರ್ಥಿಗಳಿಗೆ 30 ಸಾವಿರದಿಂದ 50 ಸಾವಿರ ಎಮ್.ಡಿ ವಿಧ್ಯಾರ್ಥಿಗಳಿಗೆ 45 ರಿಂದ 7೦ ಸಾವಿರ ಪಿ.ಎಚ.ಡಿ ವಿದ್ಯಾರ್ಥಿಗಳಿಗೆ 25 ರಿಂದ 50 ಸಾವಿರ ಗಳಷ್ಟು ಸಹಾಯ ಧನವನ್ನು ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಹಾಗೂ IIT ಗಳಲ್ಲಿ ವ್ಯಾಸಂಗ ಮಾಡುವ ಕಟ್ಟಡ ಕಾರ್ಮಿಕರ ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚದಲ್ಲಿ ಮಂಡಳಿ ಭರಿಸಲಿದೆ, ಪ್ಯಾರಾ ಮೆಡಿಕಲ್ , ಬಿಎಡ್ ಕೋರ್ಸ್ ಗಳನ್ನು ಹೊಸದಾಗಿ ಸೇರಿಸಲಾಗಿದೆ, ಕಾನೂನು ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ 30,೦0೦ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಿಗೆ ಸಹಾಯ ಧನವನ್ನು ನೀಡಲಾಗುವುದು.

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯ ಧನವನ್ನು 10,000 ದಿಂದ 20,000 ರೂಪಾಯಿಗಳಿಗೆ ಹೆಚ್ಚಿಸಲಾಯಿತು, ವಿವಾಹ ಸಹಾಯಧನವನ್ನು 50 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಯಿತು, ಈ ಎಲ್ಲಾ ನೂತನ ಪರಿಷ್ಕೃತ ಸಹಾಯ ಧನವನ್ನು ಇಂದಿನಿಂದಲ್ಲೆ ಜಾರಿಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಸುಮಾರು 8 ಲಕ್ಷಕ್ಕೂ ಅಧಿಕ ಕಾರ್ಮಿಕ ಈ ಸೌಲಭ್ಯ ಸಹಾಯವನ್ನು ಪಡೆಯಲ್ಲಿದ್ದಾರೆ ಮಂಡಳಿಯು ವಾರ್ಷಿಕವಾಗಿ ಸುಮಾರು 100 ಕೋಟಿ ರೂಪಾಯಿಗಳನ್ನು ಈ ಎಲ್ಲಾ ಯೋಜನೆಗಳಿಗೆ ವೆಚ್ಚ ಮಾಡಲಿದ್ದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ವತಿಯಿಂದ ಅಗಸ್ಟ ತಿಂಗಳ ಅಂತ್ಯದೊಳಗಾಗಿ ವಿಶೇಷ ಅದಾಲತ ಮೂಲಕವಾಗಿ ಸಹಾಯ ಧನವನ್ನು ಪಡೆಯುವುದಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲರ ಅರ್ಜಿಯನ್ನು ಇತ್ಯರ್ಥ ಮಾಡುವಂತೆ ಅಧಿಕಾರಿಗಳಿಗೆ ಖಡಕಕ್ಕಾಗಿ ಸೂಚಿಸಿದರು.

- Call for authors -

LEAVE A REPLY

Please enter your comment!
Please enter your name here