ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(46) ಇನ್ನಿಲ್ಲ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಿದ್ದು, ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.
ಹೃದಯಾಘಾತದಿಂದ ಹೈಗ್ರೌಂಡ್ಸ್ ವ್ಯಾಪ್ತಿಯ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪುನೀತ್ ರಾಜ್ ಕುಮಾರ್ ನಿಧನರಾಗಿದ್ದಾರೆ.ಮುಖ್ಯಮಂತ್ರಿ ಸೇರಿದಂತೆ ಸಚಿವರು ಆಸ್ಪತ್ರೆ ವೈದ್ಯರು, ಕುಟುಂಬದ ಜೊತೆ ಸಮಾಲೋಚನೆ ನಡೆಸಿ ನಂತರ ಅಪ್ಪು ನಿಧನದ ಸುದ್ದಿಯನ್ನು ಪ್ರಕಟಿಸಿದರು. ಇದರಿಂದಾಗಿ ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟನನ್ನು ಕಳೆದುಕೊಂಡು ಬಡವಾದಂತಾಗಿದೆ.
ತಾಳ್ಮೆ ಕಳೆದುಕೊಳ್ಳದಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಮನವಿ ಮಾಡಿರುವ ಸಿಎಂ ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ, ಕುಟುಂಬದ ಅಪೇಕ್ಷೆಯಂತೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ, ಸರ್ಕಾರಿ ಗೌರವದಿಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.








