ತುಮಕೂರು: ಇಸ್ರೇಲ್ ಮಾದರಿ ಕೃಷಿ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಕೃತಿಸ್ ಸಂಸ್ಥೆ ಹೊಸ ಪ್ರಯತ್ನಕ್ಕೆ ಮುಂದಾಗಿದೆ ಎಂದು ಸಂಸ್ಥೆಯ ಮಾರುಕಟ್ಟೆ ವ್ಯವಸ್ಥಾಪಕ ಅಶೋಕ್ ತಿಳಿಸಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಶೋಕ್,
ಕೃಷಿ ಕ್ಷೇತ್ರದ ಬಗ್ಗೆ ಆಕೃತಿಸ್ ಸಂಸ್ಥೆ ರೂಪಿಸಿರುವ ಹೊಸ ಯೋಜನೆಗಳ ಕುರಿತು ಮಾಹಿತಿ ನೀಡಿದರು. ರಾಜ್ಯ ಸರ್ಕಾರ ತುಮಕೂರು ಜಿಲ್ಲೆಯಲ್ಲಿ ಇಸ್ರೇಲ್ ತಂತ್ರಜ್ಞಾನ ಅಡಳವಡಿಕೊಂಡು ಕೃಷಿ ಮಾಡಲು ಪ್ರಾಯೋಗಿಕ ಜಿಲ್ಲೆಯನ್ನಾಗಿ ಆಯ್ಕೆ ಮಾಡಿಕೊಂಡಿದೆ. ಆದರೆ, ಇದರಿಂದ ಕೃಷಿ ಕ್ಷೇತ್ರದ ಎಲ್ಲಾ ಸಮಸ್ಯೆಗಳು ಬಗೆಹರಿದಂತಲ್ಲ. ಏಕೆಂದರೆ ನಾವು ರೈತರಿಗೆ ಯಾವುದೇ ತಂತ್ರಜ್ಞಾನ ಕೊಟ್ಟರು ಬೆಳೆದ ಬೆಳೆಗೆ ಮಾರುಕಟ್ಟೆ ದೊರೆಯದಿದ್ದಲ್ಲಿ ಎಲ್ಲ ಪ್ರಯತ್ನವು ವ್ಯರ್ಥವಾಗುತ್ತದೆ. ಇದನ್ನು ಮನಗಂಡು ನಮ್ಮ ಸಂಸ್ಥೆ ನಮ್ಮದೇ ಆದ ಒಂದು ಕ್ರಿಯಾ ಯೋಜನೆಯನ್ನು ಜಿಲ್ಲೆಯ ರೈತರಿಗೆ ಸಿದ್ದಪಡಿಸಿದ್ದೇವೆ ಎಂದು ತಿಳಿಸಿದರು.
ಕೃಷಿ ಕ್ಷೇತ್ರದಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಕೂಲಿ ಕಾರ್ಮಿಕರ ಸಮಸ್ಯೆ, ಮಾರುಕಟ್ಟೆ ಸಮಸ್ಯೆ, ನೀರಿನ ಸಮಸ್ಯೆ, ಸರಿಯಾದ ಕೀಟನಾಶಕಗಳು ದೊರೆಯದಿರದಿರುವುದು, ಕೃಷಿ ಬಿಟ್ಟು ವಲಸೆ ಹೋಗುತ್ತಿರುವುದು ಮುಂತಾದ ಸಮಸ್ಯೆಗಳನ್ನು ಅರಿತಿರುವ ನಮ್ಮ ಸಂಸ್ಥೆ ಕಳೆದ ೨ ವರ್ಷಗಳಿಂದ ಇಸ್ರೇಲ್ ಮಾದರಿ ಕೃಷಿ ವಿಚಾರದಲ್ಲಿ ತನ್ನನ್ನು ತೊಡಗಿಸಿಕೊಂಡು ಸಾಕಷ್ಟು ಅಧ್ಯಯನ ನಡೆಸಿ ಈ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಇದನ್ನು ಕಾರ್ಯಗತಗೊಳಿಸಲು ಉತ್ಸುಕವಾಗಿದೆ ಎಂದು ಹೇಳಿದರು.
ಆಕೃತಿಸ್ ಸಂಸ್ಥೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲು ಪ್ರಾಯೋಗಿಕವಾಗಿ ಜಿಲ್ಲೆಯ ಎರಡು ತಾಲ್ಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಶಿರಾ ತಾಲ್ಲೂಕಿನ ಕೆಲವು ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ ತೆಂಗು ಬೆಳೆಯುವ ಪ್ರದೇಶ ಮತ್ತು ತೆಂಗುಯೇತರ ಪ್ರದೇಶ ಎಂದು ಎರಡು ವಿಧಗಳಾಗಿ ವಿಂಗಡಿಸಿ ಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇಸ್ರೇಲ್ ಮಾದರಿ ಕೃಷಿ ಕುರಿತು ಮಾಹಿತಿಗಾಗಿ ಸಂಪರ್ಕಿಸಿ +919964979899
ಸುದ್ಧಿಗೋಷ್ಠಿಯಲ್ಲಿ ಸಂಸ್ಥೆಯ ಮೇಘ, ಸುನೀಲ್, ಭರತ್ ಹಾಜರಿದ್ದರು.









