ಬೆಂಗಳೂರು:ಮಾಜಿ ಸಚಿವ, ಹಿರಿಯ ಚಲನಚಿತ್ರ ನಟ ಅಂಬರೀಶ್ ಪಾರ್ಥೀವ ಶರೀರದ ಅಂತ್ಯಕ್ರಿಯೆ ಸೋಮವಾರ (26-11-2018) ಕಂಠೀರವ ಸ್ಟುಡಿಯೋದಲ್ಲಿ ಜರುಗಲಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿ ಸ್ಮಾರಕದ ಬಳಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಭಾನುವಾರ (25-11-2018) ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಇರಿಸಲಾಗುತ್ತಿದೆ. ಅಂತಿಮ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಗೊಳಿಸಲಾಗಿದೆ.
ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.









