ಬೆಂಗಳೂರು:ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಂಡಿಸಿದ ಚೊಚ್ಚಲ ಬಜೆಟ್ ಗೆ ವಿಧಾನಸಭೆ ಅನುಮೋದನೆ ನೀಡಿದರೆ.ಧ್ವನಿ ಮತದ ಮೂಲಕ ಧನ ವಿನಿಯೋಗ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿತು.
2018 -19ನೇ ಸಾಲಿನ ಧನ ವಿನಿಯೋಗ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಯಿತು.2018-19 ನೇ ಸಾಲಿನ ಆಯವ್ಯಯ ಅಂದಾಜುಗಳು ಮತ್ತು ಬೇಡಿಕೆಗಳ ವಿಧೇಯಕಕ್ಕೆ ಧ್ವನಿಮತದ ಮೂಲಕ ವಿಧಾನಸಭೆ ಅಂಗೀಕಾರ ನೀಡಿತು.ಇದರೊಂದಿಗೆ
ಕರ್ನಾಟಕ ಮೌಲ್ಯವರ್ಧಿತ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದ್ದು,ವಿದ್ಯುಚ್ಛಕ್ತಿ ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ ತಿದ್ದುಪಡಿ ವಿಧೇಯಕಕ್ಕೆ ಹಾಗು ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಲಾಯ್ತು.









