2018 ರ ಮೇ 31 ರವರೆಗಿನ ರೈತರ ಸಾಲಮನ್ನಾ:ಗ್ರೀನ್ ಸಿಗ್ನಲ್ ನೀಡಿದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಅನುಷ್ಠಾನ ಸಮಿತಿ

0
1133

ಬೆಂಗಳೂರು:ರೈತರ ರಾಷ್ಟೀಕೃತ ಹಾಗು ಸಹಕಾರಿ ಬ್ಯಾಂಕ್ ಗಳಲ್ಲಿನ ಬೆಳೆ ಸಾಲ ಮನ್ನಾ ಬಗ್ಗೆ ಸಮ್ಮಿಶ್ರ ಸರ್ಕಾರದ ಕನಿಷ್ಠ ಕಾರ್ಯಕ್ರಮಗಳ ಅನುಷ್ಠಾನ ಸಮಿತಿ ಒಪ್ಪಿಗೆ ನೀಡಿದ್ದು ಬಜೆಡ್ ನಲ್ಲಿ ಸಾಲಮನ್ನಾ ಘೋಷಣೆ ಖಚಿತವಾಗಿದೆ.

ರಾಜ್ಯ ಮುಂಗಡ ಬಜೆಟ್ ಹಿನ್ನಲೆಯಲ್ಲಿ ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಅನುಷ್ಠಾನ ಸಮಿತಿ ಸಭೆ ನಡೆಯಿತು.‌ಎಂ.ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಸಮಿತಿ ಸಭೆಯಲ್ಲಿ ಸಾಲಮನ್ನಾ ಸೇರಿದಂತೆ ಬಜೆಟ್ ನಲ್ಲಿ ಅಳವಡಿಸಬೇಕಾದ ಎರಡು ಪಕ್ಷಗಳ ಪ್ರಣಾಳಿಕೆ ಅಂಶಗಳ ಕುರಿತು ಚರ್ಚೆ ನಡೆಸಲಾಯಿತು.

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮೊಯ್ಲಿ,
ಮೂರನೇ ಬಾರಿಗೆ ಇವತ್ತು ಸಭೆ ನಡೆಸಲಾಗಿದೆ.ಇವತ್ತು ಕಾರ್ಯಕ್ರಮಗಳ ಕುರಿತು ಅಂತಿಮ ಸುತ್ತಿನ ಸಮಾಲೋಚನೆ ನಡೆಸಲಾಗಿದೆ.ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಹಾಗು ಜೆಡಿಎಸ್ ಪ್ರಣಾಳಿಯಕೆಯಲ್ಲಿ ಕಾರ್ಯಕ್ರಮಗಳನ್ನು ಸಮಾತೋಲನ ಮಾಡಿ ಚರ್ಚೆ ಮಾಡಲಾಗಿದೆ.2018 ರ ಮೇ 31, ವರೆಗಿನ ಸಾಲವನ್ನು ಮನ್ನಾ ಮಾಡುವ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಸಾಲ ಮನ್ನಾ ವಿಷಯದಲ್ಲಾಗಲಿ, ಪಕ್ಷದ ಕಾರ್ಯಕ್ರಮ ವಿಷಯದಲ್ಲಾಗಲಿ ಇಬ್ಬರ ನಡುವೆ ಯಾವುದೇ ಸಂಘರ್ಷ ಇಲ್ಲ.ನಮ್ಮ ಕಾರ್ಯಕ್ರಮಗಳನ್ನು ಅವರು ಒಪ್ಪಿದ್ದಾರೆ.ಅವರ ಕಾರ್ಯಕ್ರಮಗಳನ್ನು ನಾವು ಒಪ್ಪಿದ್ದೇವೆ. ಇಂದು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಸಮಿತಿ ವರದಿ ಅಂತಿಮ ಗೊಳಿಸಲಾಗಿದೆ.ಆ ವರದಿಯನ್ನು ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕೊಡ್ತೇವೆ ಎಂದರು.

ಹಣಕಾಸು ಹೊಂದಾಣಿಕೆ ಬಗ್ಗೆ ಸಿಎಂ ತೀರ್ಮಾನಕ್ಕೆ ಬಿಡಲಾಗಿದೆ. ಕಾಂಗ್ರೆಸ್- ಜೆಡಿಎಸ್ ಪ್ರಣಾಳಿಕೆಯನ್ನ ಸಮತೋಲನ ಮಾಡಲಾಗಿದೆ‌ ಐದು ವರ್ಷಕ್ಕೆ ಅನ್ವಯವಾಗುವಂತೆ ಎರಡು ಪ್ರಣಾಳಿಕೆಯ ಯೋಜನೆಗಳನ್ನ ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಿದ್ದೇವೆ ಎಂದರು.

- Call for authors -

LEAVE A REPLY

Please enter your comment!
Please enter your name here