ಹೃದಯಾಘಾತದಿಂದ ಉಪ ಮೇಯರ್ ರಮಿಳಾ ಉಮಾಶಂಕರ್ ನಿಧನ!

0
95

ಬೆಂಗಳೂರು: ಬಿಬಿಎಂಪಿಯ ಉಪಮೇಯರ್​ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮಿಳಾ ಉಮಾಶಂಕರ್​ ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನಹೊಂದಿದ್ದಾರೆ.

ಗುರುವಾರ ರಾತ್ರಿ 12.50ರಲ್ಲಿ ರಮಿಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನಗರದ ಪಶ್ಚಿಮ ಕಾರ್ಡ್​ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಕಾವೇರಿಪುರ ವಾರ್ಡ್​ನಿಂದ (103) ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಮಿಳಾ ಅವರು ಜಯ ಸಾಧಿಸಿದ್ದರು. ವಾರದ ಹಿಂದಷ್ಟೇ ಬಿಬಿಎಂಪಿಯ ಉಪ ಮೇಯರ್​ ಆಗಿ ಅವರು ಆಯ್ಕೆಯಾಗಿದ್ದರು.

ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ನಮ್ಮ ಮೆಟ್ರೋಗೆ ಭೇಟಿ ನೀಡಿದಾಗ, ಉಪ ಮುಖ್ಯಮಂತ್ರಿ ಪರಮೇಶ್ವರ್​ ಅವರು ಬೆಳ್ಳಂಬೆಳಗ್ಗೆ ನಗರದ ಮಾರುಕಟ್ಟೆಗಳ ಪರಿಶೀಲನೆಯಲ್ಲಿ ತೊಡಗಿದ್ದಾಗ ರಮಿಳಾ ಅವರೂ ಭಾಗವಹಿಸಿದ್ದರು. ಹೀಗೆ ದಿನವಿಡೀ ಲವಲವಿಕೆಯಿಂದಲೇ ಇದ್ದ ರಮಿಳಾ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ‌.

- Call for authors -

LEAVE A REPLY

Please enter your comment!
Please enter your name here