ಬೆಂಗಳೂರು: ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ.
ಗಲಭೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಲಾಯಿತು. ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಘಟನೆ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.
ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಯ ಇಂಚಿಂಚು ಮಾಹಿತಿ ನೀಡಿದರು, ಯಾವ ಯಾವ ಹಂತದಲ್ಲಿ ಯಾವ ಯಾವ ಕ್ರಮ ಕೈಗೊಳ್ಳಲಾಯಿತು ಎನ್ನುವ ವಿವರ ನೀಡಿದರು. ಗೋಲಿಬಾರ್ ಅನಿವಾರ್ಯತೆ ತಿಳಿಸಿದರು..
ನಂತರ ಇಡೀ ಘಟನೆಯ ಕುರಿತು ತನಿಖೆಗೆ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ತನಿಖೆ ನಡೆಸಲು ಆದೇಶ ನೀಡಲಾಯಿತು.









