ಪೊಲೀಸ್ ಫೋರ್ಸ್ ಬಳಸುವ ಅನಿವಾರ್ಯತೆ ಸೃಷ್ಟಿಸಬೇಡಿ: ಬೊಮ್ಮಾಯಿ

0
2

ಬೆಂಗಳೂರು:ದಿನಸಿ ಸಾಮಾನು‌ ಖರೀದಿಗೆ 12 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ, ಯಾರ್ಯಾರು ಅವಕಾಶ ಬಳಕೆ ಮಾಡಿಕೊಳ್ತಾರೋ ಮಾಡಿಕೊಳ್ಳಲಿ 12 ಗಂಟೆ ಬಳಿಕ ಅವಕಾಶ ಇಲ್ಲ, 12 ಗಂಟೆ ಒಳಗೆ ನಿಮ್ಮ ನಿಮ್ಮ ವ್ಯವಹಾರಗಳನ್ನು ಮುಗಿಸಿಕೊಳ್ಳಿ, ಪೊಲೀಸ್ ಫೋರ್ಸ್ ಬಳಸುವ ಅನಿವಾರ್ಯತೆ ತಂದುಕೊಡಬೇಡಿ, ನೀವು ಅನಿವಾರ್ಯತೆ ತಂದರೆ ಬಳಕೆ ಮಾಡಬೇಕಾಗುತ್ತದೆ, ಬಳಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡುತ್ತಾ,
ಪೊಲೀಸ್ ಇಲಾಖೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಾಲನೆ ಮಾಡಲು ಕಟ್ಟುನಿಟ್ಟಾದ ಕ್ರಮ ತೆಗೆದುಕೊಂಡಿದ್ದಾರೆ ಹಲವಾರು ಬ್ಯಾರಿಕೇಡ್ ಹಾಕಿ, ಫ್ಲೈ ಓವರ್ ಬಂದ್ ಮಾಡಿದ್ದೇವೆ ವಾಹನ ದಟ್ಟಣೆ ಕಡಿಮೆ‌ ಇದೆ, ಲಾಕ್ ಡೌನ್ ವಾತಾವರಣ ನಿರ್ಮಾಣವಾಗಿದೆ ಅಗತ್ಯ ಸೇವೆಗಳಿಗೆ ಅವಕಾಶ ಕೊಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ ಪೊಲೀಸರು ಸಹಕಾರ ಕೊಟ್ಟು ಕೆಲಸ ಮಾಡ್ತಾರೆ, ಜನರೂ ಕೂಡಾ ಸಹಕಾರ ನೀಡಬೇಕು ಎಂದರು.

ಲಾಕ್ ಡೌನ್ ಯಶಸ್ವಿ ಆಗಬೇಕಾದರೆ ಜನರ ಸ್ವಯಂಪ್ರೇರಿತ ಲಾಕ್ ಡೌನ್ ಆಗಬೇಕು ಈ ಬಾರಿ ಹೆಚ್ಚು ಸೋಂಕು ಇರುವ ಕಾರಣ ಚೈನ್ ಬ್ರೇಕ್ ಮಾಡಲು ಲಾಕ್ ಡೌನ್ ಮಾಡಿದ್ದೇವೆ
ಅನಾವಶ್ಯಕ ಓಡಾಟ ತಡೆಗಟ್ಟಿ ಎಂದು ಪೊಲೀಸರಿಗೆ ಸೂಚಿಸಿದ್ದೇವೆ ಫೋರ್ಸ್ ಬಳಸುವ ಅನಿವಾರ್ಯತೆ ಬರದಂತೆ ಜನರು ಸಹಕಾರ ಮಾಡಬೇಕು ಎಂದು ಮನವಿ ಮಾಡಿದ್ರು.

- Call for authors -

LEAVE A REPLY

Please enter your comment!
Please enter your name here