ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಮುಖಂಡರಿಗೆ, ಕಾರ್ಯಕರ್ತರಿಗೆ ಎಚ್ಡಿಡಿ ಪತ್ರ!

0
1

ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದು ಎರಡೂವರೆ ವರ್ಷ ಕಳೆದಿದೆ. ಇನ್ನೂ ಒಂದು ವರ್ಷದಲ್ಲಿ ಮತ್ತೆ ಚುನಾವಣೆ ಬಿಸಿ ಆರಂಭವಾಗುತ್ತದೆ. ದುರಾದೃಷ್ಟವಶಾತ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಿಮ್ಮಗಳ ಹಿತ ಕಾಪಾಡುವಲ್ಲಿ ನಾವು ಎಡವಿದ್ದೇವೆ. ಇದು ಪಕ್ಷಕ್ಕೆ ದೊಡ್ಡಹಾನಿ ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಇನ್ನೂ ಒಂದು ವರ್ಷದಲ್ಲಿ ಪಕ್ಷವನ್ನು ಚುರುಕು ಗೊಳಿಸಬೇಕಾಗಿದೆ. ಇದರ ಅನಿವಾರ್ಯತೆಯನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಖುದ್ದಾಗಿ ನಿಮ್ಮನ್ನು ಬರಮಾಡಿಕೊಂಡು ಇದ್ದೆಲ್ಲವನ್ನೂ ಮನಬಿಚ್ಚಿ ಮಾತನಾಡಬೇಕು ಅನ್ನೋದು ಇಚ್ಛೆ. ಆದ್ರೆ ಲಾಕ್ ಡೌನ್ ಅದಕ್ಕೆ ಅಡ್ಡಿಯಾಗಿದೆ. ಲಾಕ್ ಡೌನ್ ಯಾವಾಗ ಮುಗಿಯುತ್ತೋ ಏನೋ ಅಲ್ಲಿವರೆಗೆ ಕೈಕಟ್ಟಿಕುಳಿತುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಿಮ್ಮ ನಿಮ್ಮ ವಿಧಾಮಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೆಲಸ ಶುರು ಮಾಡಿ ಎಂದು ಪತ್ರದ ಮೂಲಕ ಕರೆ ನೀಡಿದ್ದಾರೆ.

ಪಕ್ಷ ಸಂಘಟನೆಯಲ್ಲಿ ನಿಮ್ಮ ಭವಿಷ್ಯ ಮತ್ತು ಪಕ್ಷದ ಭವಿಷ್ಯ ಎರಡೂ ಅಡಗಿದೆ ಎಂಬುದನ್ನು ಅರ್ಥಮಾಡಿಕೊಂಡು ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಚುರುಕಾಗಿ ಪಕ್ಷದ ಸಂಘಟನೆ ಮಾಡಬೇಕು. ಕೊರೋನಾ ವಾತಾವರಣ ತಿಳಿಯಾಗುವವರೆಗೆ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

- Call for authors -

LEAVE A REPLY

Please enter your comment!
Please enter your name here