ಶಾಸಕರಿಗೆ ಉಡುಗೊರೆ, ಜನತೆಗೆ ಬರೆ ಸರ್ಕಾರದ ವಿರುದ್ಧ ಎಚ್ಡಿಕೆ ವ್ಯಂಗ್ಯ

0
2

ಬೆಂಗಳೂರು: ರಾಜ್ಯದ ಜನರು ಕೊರೋನಾ ಸಂಕಷ್ಟದಿಂದ ತತ್ತರಿಸಿದ್ರೆ ಬಿಜೆಪಿ ಸರ್ಕಾರ ವರ್ಷಾಚರಣೆ ಸಂಭ್ರಮದ ಜೊತೆ ಶಾಸಕರಿಗೆ ಉಡುಗೊರೆ ನೀಡಿ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸ್ತಿದೆ ಅಂತಾ ಮಾಜಿ ಸಿಎಂ ಎಚ್ಡಿಕೆ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಟ್ವಟರ್ ಮೂಲಕ ಸರ್ಕಾರಷ ವಿರುದ್ಧ ಕಿಡಿ ಕಾರಿರೋ ಎಚ್ಡಿಕೆ, ಕೊರೋನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ, ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ.

ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ ‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ.

ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ.

ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಿ.

ಹಗಲನಿರುಳು ಮಾಡಿ, ಇರುಳ ಹಗಲ ಮಾಡಿ
ಆಚಾರವ ಅನಾಚಾರವ ಮಾಡಿ
ಅನಾಚಾರವ ಆಚಾರವ ಮಾಡಿ
ಭಕ್ತನ ಭವಿಯ ಮಾಡಿ, ಭವಿಯ ಭಕ್ತನ ಮಾಡಿ
ನುಡಿವವರ ಮಾತ ಕೇಳಲಾಗದು ಗುಹೇಶ್ವರಾ.

- Call for authors -

LEAVE A REPLY

Please enter your comment!
Please enter your name here