ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ: ಎಚ್ಡಿಕೆ

0
2

ಬೆಂಗಳೂರು: ವೈಯಕ್ತಿಕ ನೆಲೆಯಲ್ಲಿ ಸ್ನೇಹ ವಿಶ್ವಾಸವೇ ಬೇರೆ, ಆದರೆ, ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಸ್ನೇಹಿತನನ್ನು ದಾಳವಾಗಿ ಬಳಸಿಕೊಂಡು ಮತ್ತೊಂದು ಪಕ್ಷಕ್ಕೆ ಕಳುಹಿಸುವ ಜಾಯಮಾನ ನನ್ನದಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿ(ಎಸ್) ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಸಿದ್ದರಾಮಯ್ಯ ಅವರ ಬಳಿ ಇದಕ್ಕೆ ಯಾವ ಸಾಕ್ಷಿ ಇದೆ ? “ದೋಸ್ತಿ ದಾಳ” ವನ್ನು ರಾಜಕೀಯವಾಗಿ ಬಳಸಿಕೊಂಡು ತಾವು ಬೆಳೆದ ಪಕ್ಷಗಳಿಗೆ ಕುತ್ತು ತರುವ ಚಾಳಿ ಅವರಿಗೆ ಹೊಸತೇನಲ್ಲ.

ನನಗೂ ಪಕ್ಷಾತೀತವಾಗಿ ಹಿರಿಯ, ಕಿರಿಯ ಸ್ನೇಹಿತರಿದ್ದಾರೆ. ಪವಿತ್ರ ಸ್ನೇಹವನ್ನು ನಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಆದರೆ, ಸಿದ್ದರಾಮಯ್ಯರವರಿಗೆ ಇದೊಂದು ಅಂಟುಜಾಡ್ಯ ಎಂಬುದನ್ನು ಸಾಬೀತು ಪಡಿಸುತ್ತಲೆ ಬಂದಿದ್ದಾರೆ. ಉಪ ಚುನಾವಣೆ ಘೋಷಣೆಯಾದ ನಂತರ ಪುತ್ರನ ಗೆಳೆಯನನ್ನು ಬಿಜೆಪಿಗೆ ಕಳುಹಿಸಿರುವ ಮರ್ಮವನ್ನು ಕಾಂಗ್ರೆಸ್ಸಿಗರೂ ಬಲ್ಲರು!

ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆಗಾಡಿ,
ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ
ಅಳಲಿಸಿ ಬಳಲಿಸುತ್ತಿದೆ ನೋಡಾ:
ಕೂಡಲಸಂಗಮೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ,
ಅಪರಿಮಿತದ ಸುಖವನೈದದು, ನೋಡಾ….ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

- Call for authors -

LEAVE A REPLY

Please enter your comment!
Please enter your name here