ಕಸ್ತೂರಿ ರಂಗನ್ ವರದಿ ಜಾರಿ: ಕೇಂದ್ರ ಸಚಿವರ ವಿಡಿಯೋ ಕಾನ್ಫರೆನ್ಸ್

0
1

ಬೆಂಗಳೂರು, ಮೇ 21-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿ, ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಕುರಿತು ಚರ್ಚಿಸಿದರು.

ಈ ಕುರಿತು ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿದೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ.

ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಇದಕ್ಕೆ ಸಹಮತ ವ್ಯಕ್ತ ಪಡಿಸಿ, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು.

ರಾಜ್ಯದ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು/ ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Call for authors -

LEAVE A REPLY

Please enter your comment!
Please enter your name here