ಬೆಂಗಳೂರು: ಲಾಕ್ ಡೌನ್ ಜಾರಿ ಉತ್ತಮ ನಿರ್ಧಾರವಾಗಿದ್ದು, ಇತರ ಜಿಲ್ಲೆಗಳಲ್ಲೂ ಜಾರಿಗೊಳಿಸಿದರೆ ಬೆಂಬಲಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲಾಕ್ ಡೌನ್ ಗೆ ಸಹಮತ ವ್ಯಕ್ತಪಡಿಸಕದ್ದಾರೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ.
ಕರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದು ಟ್ವಿಟರ್ ಮೂಲಕ ಎಚ್ಡಿಕೆ ಅಭಿವೃದ್ಧಿ ವ್ಯಕ್ತಪಡಿಸಿದ್ದಾರೆ









