ಸಮ್ಮಿಶ್ರ ಸರ್ಕಾರದ ಭವಿಷ್ಯ ಸಿದ್ದು‌ ಹೇಳಿಕೆಯನ್ನು ಹೈಕಮಾಂಡ್ ಗಮನಿಸುತ್ತಿದೆ:ಖರ್ಗೆ

0
33

ದೆಹಲಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಖರ್ಗೆ,ನಾಳೆ ಅಥವಾ ನಾಡಿದ್ದು ಸಿದ್ದರಾಮಯ್ಯರನ್ನು ಭೇಟಿಯಾಗಲಿದ್ದೇನ. ಅವರ ಜತೆ ಮಾತಕತೆ ನಡೆಸುತ್ತೇನೆ ವಿಡಿಯೋ ಬಗ್ಗೆ ವಿಶೇಷ ಮಾಹಿತಿ ಇಲ್ಲ ನಾನೂ ಟಿವಿಯಲ್ಲಿ ನೋಡಿದ್ದೇನೆ ಅಷ್ಟೇ ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ ವಿಡಿಯೋವನ್ನು ತಿರುಚಿರುವ ಸಾಧ್ಯತೆ ಇದೆ ನಿಜವಾಗಿಯೂ ಸಿದ್ದರಾಮಯ್ಯ ಹೇಳಿದ್ದಾರೋ ಎಂದು ಅವರನ್ನೇ ಕೇಳಬೇಕಿದೆ ಕಾಂಗ್ರೆಸ್ ಹೈಕಮಾಂಡ್ ಕೂಡ ಇದನ್ನು ಗಮನಿಸುತ್ತಿದೆ ಎಂದರು.

ಸಿದ್ದು ಹೇಳಿಕೆ ಸಂಬಂಧ ವಿಭಿನ್ನ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗಿವೆ,ಇವು ವಾಸ್ತವ ಹೇಳಿಕೆಯೋ ಅಥಾವ ಮಾಧ್ಯಮಗಳಲ್ಲಿ ತಿರುಚಲಾಗಿದೆಯೋ ಎನ್ನುವುದನ್ನು ಪರಿಶೀಲಿಸಲಾಗುವುದು, ಭಿನ್ನ ಹೇಳಿಕೆ ನೀಡ್ತಿರುವ ನಾಯಕರ ಅಭಿಪ್ರಾಯ ಕೇಳಲಿದ್ದೇವೆ ಎಂದರು.

ಮೈತ್ರಿ ಸರ್ಕಾರಕ್ಕೆ ಎಲ್ಲರೂ ಶಕ್ತಿ ತುಂಬುವ ಕೆಲಸ ಮಾಡಬೇಕು
ಮೈತ್ರಿ ಸರ್ಕಾರ ಒಗ್ಗಟ್ಟಾಗಿ ಇದೆ.ಎಷ್ಟು ತೊಂದರೆಗಳು ಬಂದರು ಮೈತ್ರಿ ಸರ್ಕಾರ ಮುನ್ನೆಡಸಬೇಕಿದೆ ಕೊಮುವಾದಿ ಬಿಜೆಪಿಯನ್ನು ದೂರ ಇಡುವುದು ನಮ್ಮ ಗುರಿ ಅದಕ್ಕಾಗಿಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದರು.

- Call for authors -

LEAVE A REPLY

Please enter your comment!
Please enter your name here