ಮಂಡ್ಯದ ಗಂಡು ಅಂತಿಮ ದರ್ಶನಕ್ಕೆ ತವರಿನಲ್ಲೂ ವ್ಯವಸ್ಥೆ!

0
2460

ಬೆಂಗಳೂರು: ಮಂಡ್ಯದಲ್ಲಿ ಅಂಬರೀಷ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ಅಭಿಮಾನಿಗಳು ಬೇಡಿಕೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ರಕ್ಷಣಾ ಸಚಿವರೊಂದಿಗೆ ಮುಖ್ಯಮಂತ್ರಿಗಳು ಮಾತನಾಡಿ ಸೂಕ್ತ ಹೆಲಿಕಾಪ್ಟರ್ ಒದಗಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ರಕ್ಷಣಾ ಇಲಾಖೆಯವರು ಹೆಲಿಕಾಪ್ಟರ್ ಒದಗಿಸಲು ಸಮ್ಮತಿಸಿದ್ದಾರೆ.

ಇಂದು ಸಂಜೆ 4 ಗಂಟೆಗೆ ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಒಯ್ಯಲು ವ್ಯವಸ್ಥೆ ಮಾಡಲಾಗಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜನತೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 6 ಗಂಟೆಗೆ ಅಂಬರೀಷ್ ಪಾರ್ಥಿವ ಶರೀರವನ್ನು ಮತ್ತೆ ಕಂಠೀರವ ಕ್ರೀಡಾಂಗಣಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೋ ವರೆಗೆ ಮೆರವಣಿಗೆಯಲ್ಲಿ ತೆರಳಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಮುಖ್ಯಮಂತ್ರಿಗಳು ಇಂದು ಬೆಳಿಗ್ಗೆಯಿಂದಲೇ ಕಂಠೀರವ ಕ್ರೀಡಾಂಗಣದಲ್ಲಿ ಹಾಜರಿದ್ದು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಅಂಬರೀಷ್ ಪತ್ನಿ ಸುಮಲತಾ, ಉಪಮುಖ್ಯಮಂತ್ರಿ ಡಾ. ಪರಮೇಶ್ವರ, ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಮತ್ತಿತರರೊಂದಿಗೆ ನಾಳೆ ಅಂತ್ಯಕ್ರಿಯೆಯ ಪೂರ್ವಸಿದ್ಧತೆ ಕುರಿತು ಚರ್ಚಿಸಿದರು.

ಅಂತ್ಯಕ್ರಿಯೆ ನಡೆಯಲಿರುವ ಕಂಠೀರವ ಸ್ಟುಡಿಯೋದಲ್ಲಿನ ವ್ಯವಸ್ಥೆ ಪರಿಶೀಲಿಸುವಂತೆ ಉಪಮುಖ್ಯಮಂತ್ರಿ ಯವರಿಗೆ ಮನವಿ ಮಾಡಿದ್ದು ಅದರಂತೆ ಅವರು ಕಂಠೀರವ ಸ್ಟುಡಿಯೋಗೆ ತೆರಳಿದ್ದಾರೆ.

- Call for authors -

LEAVE A REPLY

Please enter your comment!
Please enter your name here