ಮುಂಗಾರು ಮಳೆ: ಪ್ರಾಣ, ಆಸ್ತಿ ರಕ್ಷಣೆಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಸೂಚನೆ

1
21

ಬೆಂಗಳೂರು: ಮುಂಗಾರು ಮಳೆಯಿಂದಾಗಿ ಬೆಂಗಳೂರು ನಗರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರು ಮಹಾ ನಗರಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಂದು ಮಹಾ ನಗರಪಾಲಿಕೆಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಮುಂಗಾರು ಮಳೆ ಆರಂಭವಾಗಿದೆ. ಬಿರುಸಿನ ಗಾಳಿಯ ಜೊತೆಗೆ ಬೀಳುತ್ತಿರುವ ಮಳೆ ಆತಂಕಕಾರಿಯಾಗದಂತೆ ನೋಡಿಕೊಳ್ಳಬೇಕಾದ ಅಗತ್ಯ ಇದೆ. ಜನರಿಗೆ ಪ್ರಾಣಾಪಾಯವಾಗದಂತೆ, ರಸ್ತೆಗಳಲ್ಲಿ ಗುಂಡಿ ಬೀಳದಂತೆ ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳಿ ಎಂದರು.

ತಗ್ಗಿನ ಪ್ರದೇಶಗಳಲ್ಲಿ ನೀರು ನುಗ್ಗಿ ಆತಂಕವಾಗದಂತೆ ಹಾಗೂ ಜನಜೀವನ ಅಸ್ತವ್ಯಸ್ಥವಾಗದಂತೆ ನೋಡಿಕೊಳ್ಳಿ. ಕಾಲುವೆಗಳಲ್ಲಿ, ಮೋರಿಗಳಲ್ಲಿ ನೀರು ನಿಲ್ಲದಂತೆ, ಜೀವಗಳು ಕೊಚ್ಚಿಹೋಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಹಾನಗರಪಾಲಿಕೆಯ ಅಧಿಕಾರಿಗಳು ಮಾತನಾಡಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕೆಲಸ ಈಗಾಗಲೇ ಕೈಗೊಂಡಿದ್ದೇವೆ. ಮಳೆ ಬಿರುಸಾಗುವುದಕ್ಕೆ ಮುನ್ನ ಎಲ್ಲಾ ಗುಂಡಿಗಳನ್ನು ಯುದ್ಧೋಪಾದಿಯಲ್ಲಿ ಮುಚ್ಚುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತ್ಯಾಜ್ಯ ನಿರ್ವಣೆಯ ಬಗ್ಗೆ ಸಾರ್ವಜನಿಕರು ವ್ಯಕ್ತಪಡಿಸುತ್ತಿರುವ ಆತಂಕವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಇಂದಿಗೂ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ. ಉತ್ತಮ ಸ್ವಚ್ಛತೆಯನ್ನು ಕಾಪಾಡುವುದು ಸರ್ಕಾರದ ಕರ್ತವ್ಯ. ಆದಷ್ಟೂ ಬೇಗ ಪರಿಸ್ಥಿತಿಯನ್ನು ಉತ್ತಮಪಡಿಸುವಂತೆ ತಿಳಿಸಿದರು.

- Call for authors -

1 COMMENT

  1. ಪ್ರತಿವರ್ಷ ಇದೇ‌ ಹೇಳ್ತಿರ್ತಾರೆ. ಆಗೋ ಅನಾಹುತಗಳು ಆಗ್ತನೇ ಇರ್ತವೆ. ಸಿಎಂ ಮಾತು ಅಧಿಕಾರಿಗಳು ಕೇಳಿದ್ರು, ಮಳೆ ಕೇಳಲ್ವಲ್ಲ..

LEAVE A REPLY

Please enter your comment!
Please enter your name here