ಗದಗ:ಸರಕಾರ ಎಚ್ಚೆತ್ತುಕೊಂಡಿದ್ರೆ ಕೊಡಗು ಜನ್ರ ಪ್ರಾಣಹಾನಿ ತಡೆಯ ಬಹುದಿತ್ತು,ಸರಕಾರದ ನಿರ್ಲಕ್ಷ್ಯದಿಂದ ಪ್ರಾಣಹಾನಿ ,ಪ್ರಾಣಿಗಳ ಹಾನಿ,ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರಾಮುಲು, ಮುಖ್ಯಮಂತ್ರಿಗಳು ಹಾಗೂ ಮಂತ್ರಿಮಂಡಲ ಮುಂಜಾಗ್ರತ ಕ್ರಮ ಕೈಗೊಳ್ಳಲಿಲ್ಲ.ಇಷ್ಟೆಲ್ಲಾ ಘಟನೆ ನಡೆದ್ರೂ ಸಿಎಂ ತಡವಾಗಿ ಭೇಟಿ ನೀಡಿರುವುದು ದುರದೃಷ್ಟಕರ,ಸಚಿವ ಎಚ್.ಡಿ ರೇವಣ್ಣ ಬಿಸ್ಕೆಟ್ ಎಸೆದಿರುವುದು ದುರಾದೃಷ್ಟ.ಮಾಜಿ ಪ್ರಧಾನಿ ಮಗ ರೇವಣ್ಣಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಇರಬೇಕಿತ್ತು.ಸರಕಾರ ಮತ್ತು ಸಚಿವ ಸ್ಥಾನದ ಅಹಂಕಾರ ಅವರಲ್ಲಿ ತುಂಬಿಕೊಂಡಿದೆ
ಇದು ಅಧಿಕಾರ ಅಹಮ್ ಬಹಳ ದಿನ ಉಳಿಯುವುದಿಲ್ಲ ಎಂದ್ರು.
ಇನ್ನು ನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರದಿಂದ ಸೂಕ್ತ ಅನುದಾನ ಸಿಗಲ್ಲಿದೆ.ಇದರಲ್ಲಿ ಯಾವುದೇ ಅನುಮಾನ ಬೇಡ.
ಪ್ರಧಾನಿಗಳು ಕೇರಳ ಹಾಗೂ ಕರ್ನಾಟಕಕ್ಕೆ ಸೂಕ್ತ ಪರಿಹಾರ ನೀಡುತ್ತಾರೆ ಎಂದ್ರು.
ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ, ಮುಂದೇಯು ಅನ್ಯಾಯ ಆಗಲಿದೆ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಉತ್ತರ ಕರ್ನಾಟಕದ ಅನ್ಯಾಯದ ಬಗ್ಗೆ ಮತ್ತೆ ಶ್ರೀರಾಮುಲು ಧ್ವನಿ ಎತ್ತಿದರು.









