ಮಡಿಕೇರಿ: ಮಹಾ ಮಳೆಯಿಂದ ತತ್ತರಿಸಿರುವ ಕೊಡಗಿನ ಜನತೆಗೆ ಇದೀಗ ಜಿಲ್ಲೆಯಲ್ಲಿ ಭೂಕಂಪ ಸಂಭವಿಸುತ್ತದೆ ಎನ್ನುವ ಸುಳ್ಳು ಸುದ್ದಿ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕೊಡಗಿನಲ್ಲಿ ಭೂಕಂಪನವಾಗುವ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಸಂಕಷ್ಟದಲ್ಲಿ ಸಿಲುಕಿರುವ ಕೊಡಗಿನ ಜನತೆಯ ಕಿವಿಗೆ ಬಿದ್ದು ಮತ್ತಷ್ಟು ಚಿಂತೆಗೆ ಈಡು ಮಾಡಿದ್ದು, ಭಯದಲ್ಲೇ ಕಾಲ ಕಳೆಯುವಂತೆ ಮಾಡುತ್ತಿದೆ.
ಈ ಕುರಿತಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.










