ಡಿಕೆ ಶಿವಕುಮಾರ್ ಪದಗ್ರಹಣಕ್ಕಿಂತ ರಾಜ್ಯ ಮುಖ್ಯ: ಅಶೋಕ್

0
0

ಬೆಂಗಳೂರು: ಪದಗ್ರಹಣ ಕಾರ್ಯಕ್ರಮ ಮಾಡಬೇಕಾದರೆ ನಿಯಮಗಳನ್ನು ಬದಲಾವಣೆ ಮಾಡಬೇಕು. ಅವರ ಪದಗ್ರಹಣ ದೇಶಕ್ಕೆ ರಾಜ್ಯಕ್ಕೆ ಬಹಳ ಮುಖ್ಯ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ
ಕೆಪಿಸಿಸಿ ಅಧ್ಯಕ್ಷ ರಾದ ಡಿಕೆ ಶಿವಕುಮಾರ್ ಅವರು ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡ್ತಾ ಇದಾರೆ. ಅವರ ಪದಗ್ರಹಣಕ್ಕೆ ಸರ್ಕಾರ ಅಡ್ಡಿ ಮಾಡ್ತಿಲ್ಲ.ಸರ್ಕಾರ ಮತ್ತು ಅವರಿಗೆ ಎಣ್ಣೆ ಸಿಗೇಕಾಯಿ ಇದ್ದ ಹಾಗೆ ಎಂದು ಟೀಕಿಸಿದರು.

ಪರಿಷತ್ ಗೆ ಈಗಷ್ಟೇ ಚುನಾವಣೆ ಘೋಷಣೆ ಆಗಿದೆ. ಕೇಂದ್ರ ಮತ್ತು ರಾಜ್ಯದ ನಾಯಕರು ಚರ್ಚೆ ಮಾಡಿ ಅಭ್ಯರ್ಥಿ ಗಳ ಹೆಸರು ಪ್ರಕಟಿಸಲಾಗುತ್ತದೆ. ಈಗಾಗಲೇ ಯಡಿಯೂರಪ್ಪ ಅವರು ಮಾತು ಕೊಟ್ಟಿರುವವರೂ ಇದ್ದಾರೆ. ಚರ್ಚೆ ನಂತರ ಅಭ್ಯರ್ಥಿ ಗಳ ಹೆಸರು ಹೇಳಲಾಗುತ್ತದೆ. ರಾಜ್ಯಸಭೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ನಂತೆ ಕುಟುಂಬ ರಾಜ ಕಾರಣಕ್ಕೆ ಮಣೆ ಹಾಕಿಲ್ಲ.
ಇದರಿಂದ ಕಾಂಗ್ರೆಸ್ ನಲ್ಲಿ ಈಗಾಗಲೇ ಬಂಡಾಯ ಶುರುವಾಗಿದೆ. ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ನಲ್ಲಿ ಕೂಡಾ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂದು ಅಸಮಧಾಮ ಶುರುವಾಗಿದೆ ಎಂದರು.

- Call for authors -

LEAVE A REPLY

Please enter your comment!
Please enter your name here