ಬಾಯ್ಲರ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರ ಸಾವು

0
34

ರಾಮನಗರ:ಬಾಯ್ಲರ್ ಸ್ವಚ್ವತೆಗೆಂದು ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಆಂಥ್ಯಾಮ್ ಬಯೋಸೈನ್ ಕಾರ್ಖಾನೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಲೋಕೇಶ್, ಕನಕಪುರ ತಾಲೂಕಿನ ಗೊಟ್ಟಿಗೆಹಳ್ಳಿ ನಿವಾಸಿ ಮಹೇಶ್, ತಮಿಳುನಾಡು ಮೂಲದ ಶರವಣ ಮೃತ ದುರ್ದೈವಿಗಳಾಗಿದ್ದು, ಮತ್ತೊಬ್ಬ ಹರಿ ವಿಲಿಘನ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರೋ ಆಂಥ್ಯಾಮ್ ಬಯೋಸೈನ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ವಚ್ವತೆಗೆಂದು ನಾಲ್ವರು ಕಾರ್ಮಿಕರು ಇಳಿದಿದ್ದರು.ಆದರೆ ಆಮ್ಲಜನಕ ಕೊರತೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿದ್ದು ಈ ಸಂಬಂಧ ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Call for authors -

LEAVE A REPLY

Please enter your comment!
Please enter your name here