ರಾಜಕಾರಣಿಗಳಿಂದ ದೇಶದ ಉದ್ದಾರ ಸಾಧ್ಯವಿಲ್ಲ : ಜಿ.ಟಿ ದೇವೇಗೌಡ

0
214

ಬೆಂಗಳೂರು: ರಾಜಕಾರಣಿಗಳಿಂದ ಈ ದೇಶ ಮುಂದೆ ಬರಲು ಸಾಧ್ಯವಿಲ್ಲ. ದೇಶವನ್ನು ಅವರು ಉದ್ದಾರ ಮಾಡುವುದೂ ಇಲ್ಲ

ದೇಶ ಅಭಿವೃದ್ಧಿ ಆಗಬೇಕಾದರೆ ನಿಮ್ಮಂತ ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಹೇಳಿದ್ದಾರೆ.

ರೇವಾ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೇಗೌಡ ಭಾಗವಹಿಸಿದರು.ವಿದ್ಯಾರ್ಥಿಗಳಿಗೆ ಪದವಿ ಪ್ರದಾನಿಸಿ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಡಾ ಬಿ.ಆರ್ ಅಂಬೇಡ್ಕರ್ ಒಬ್ಬರಿಗೆ ಒಂದೇ ಮತ ನೀಡುವ ಅವಕಾಶವನ್ನು ನೀಡಿದ್ದಾರೆ. ಆದ್ದರಿಂದ ನೀವು ಜನಪ್ರತಿನಿಧಿಗಳನ್ನ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕಿದೆ ಎಂದ್ರು.

ಎಪಿಜೆ ಅಬ್ದುಲ್ ಕಲಾಂ ಅವರನ್ನೂ ಕೂಡ ಈ ವೇಳೆ ಸ್ಮರಿಸಿದ ಸಚಿವರು ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಕಲಾಂ ಅವರು‌ ಸಾವನ್ನಪ್ಪಿದರು .ಶಿಕ್ಷಣದ ಮಹತ್ವ ಇದು, ರಾಜಕಾರಣಿಗಳಿಂದ ಇದು ಸಾಧ್ಯವಿಲ್ಲ ಎಂದ್ರು.

ಸರ್ಕಾರಿ ಕಾಲೇಜುಗಳ ಪರಿಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ವಿವಿಧ ವಿವಿಗಳ ಉಪಕುಲಪತಿಗಳು, ಅಧಿಕಾರಿಗಳ ವಿರುದ್ದ ಗರಂ ಆದ ಸಚಿವರು ಸರ್ಕಾರಿ ಕಾಲೇಜುಗಳಲ್ಲಿ ಎಲ್ಲವೂ ಸಮಸ್ಯೆಯಾಗಿರುತ್ತದೆ.ಕಟ್ಟಡಗಳೇ ಇಲ್ಲದೆ ಕಾಲೇಜುಗಳನ್ನು ನಡೆಸಬೇಕಾದ ಸ್ಥಿತಿ ಇರುತ್ತದೆ. ಸರ್ಕಾರ ಕೋಟಿ ಕೋಟಿ ಹಣ ಅನುದಾನ ನೀಡುತ್ತದೆ. ಆದರೂ ನಮ್ಮ ಸರ್ಕಾರಿ ಕಾಲೇಜುಗಳ ಸ್ಥಿತಿ ಯಾಕೆ ಹೀಗಿದೆ? ನಮ್ಮ ವಿಸಿಗಳನ್ನ ನಿಮ್ಮ ಕಾಲೇಜುಗಳಿಗೆ ಕಳುಹಿಸಿಕೊಡುತ್ತೇನೆ.ನಿಮ್ಮಿಂದ ನೋಡಿ ಕಲಿಯಲಿ. ಸರ್ಕಾರಿ ಕಾಲೇಜುಗಳನ್ನು ಉನ್ನತ ದರ್ಜೆಗೆ ಏರಿಸಲು ಕೆಲಸ ಮಾಡಲಿ. ಖಾಸಗಿ ಯೂನಿವರ್ಸಿಟಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿವೆ. ನಮ್ಮ ಅಧಿಕಾರಿಗಳು, ವಿಸಿ ಗಳು ಸರ್ಕಾರಿ ಕಾಲೇಜುಗಳ ಹೆಸರು ಕೆಡಿಸುತ್ತಿದ್ದಾರೆ ಎಂದು ಜಿ.ಟಿ ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ರು.

- Call for authors -

LEAVE A REPLY

Please enter your comment!
Please enter your name here