ಆನ್ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ ಯೋಜನೆ ಕೈಬಿಡಿ: ಎಚ್ಡಿಕೆ ಒತ್ತಾಯ

0
1

ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ ಅಥವಾ ಚಿಂತನೆಯನ್ನು ಕೈಬಿಡುವಂತೆ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ‌ ಎಂದು ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಇಲ್ಲ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸಲ್ಲ ಎಂದು ಸರಕಾರವನ್ನು ತರಾಟೆ ತೆಗೆದುಕೊಂಡರು.

- Call for authors -

LEAVE A REPLY

Please enter your comment!
Please enter your name here