ಎಲೆಕ್ಟ್ರಾನಿಕ್ ಸಿಟಿಯಲ್ಲೊಂದು ಹೃದಯ ವಿದ್ರಾವಕ ಘಟನೆ: ಉಸಿರು ಕಟ್ಟಿ ಎರಡು ಕಂದಮ್ಮಗಳ ಸಾವು!

0
57

ಬೆಂಗಳೂರು: ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ಉಂಟಾದ ಹೊಗೆಯಲ್ಲಿ ಉಸಿರುಕಟ್ಟಿ ಎರಡು ಕಂದಮ್ಮಗಳು ಸಾವಿಗೀಡಾದ ಹೃದಯವಿದ್ರಾವಕ ಘಟನೆ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಹೊಟ್ಟೆಪಾಡಿಗಾಗಿ ದೂರದ ನೇಪಾಳದಿಂದ ಬಂದಿದ್ದ ದೇವೇಂದ್ರ ಮತ್ತು ರೂಪಸಿ ದಂಪತಿಗಳ ಸೃಜನ್(5) ಮತ್ತು ಲಕ್ಷ್ಮಿ(2) ಮೃತ ದುದೈರ್ವಿ ಮಕ್ಕಳು.

ಎಲೆಕ್ಟ್ರಾನಿಕ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಾ ಶೆಡ್ ಒಂದರಲ್ಲಿ ವಾಸವಿದ್ದ ನೇಪಾಳ ದಂಪತಿಗಳು ಕೂಲಿ ಕೆಲಸ ಮಾಡಿಕೊಂಡಿದ್ದರು, ಇಂದು ಬೆಳಿಗ್ಗೆ ದೇವೇಂದ್ರ ದಂಪತಿ ಶೆಡ್ ಒಳಗೆ ಮಕ್ಕಳನ್ನು ಬಿಟ್ಟು ಹೊರಗಿನಿಂದ ಚಿಲಕ ಹಾಕಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಕ್ಕಳು ಬೆಂಕಿ ಪೊಟ್ಟಣದಲ್ಲಿ ಆಟವಾಡುವಾಗ ಬಟ್ಟೆಗೆ ಬೆಂಕಿ ಹೊತ್ತಿಕೊಂಡಿದ್ದು ಇದರಿಂದ ಉಂಟಾದ ಹೊಗೆಯಿಂದ ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ್ದಾರೆ.

ಪೋಷಕರು ಕೆಲಸದಿಂದ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Call for authors -

LEAVE A REPLY

Please enter your comment!
Please enter your name here